Advertisement

Dam water release: ಪುಣೆ ವಿವಿಧೆಡೆ ಜಲಾವೃತ

01:01 AM Aug 05, 2024 | Team Udayavani |

ಮುಂಬಯಿ: ಮಹಾರಾಷ್ಟ್ರದ ಖಡಕ್‌ವಾಸ್ಲಾ ಅಣೆ ಕಟ್ಟನ್ನು ತೆರೆದಿರುವ ಕಾರಣ ಪುಣೆಯ ಹಲವು ನಗರ ಗಳು ಜಲಾವೃತಗೊಂಡಿವೆ. ವಿವಿಧೆಡೆ ಮನೆಗಳಿಗೆ ನೀರು ನುಗ್ಗಿದೆ. ಮಳೆ ಹೆಚ್ಚಿರುವ ಕಾರಣ ಪರಿಸ್ಥಿತಿ ಕೈಮೀರುತ್ತಿದೆ ಈ ಹಿನ್ನೆಲೆಯಲ್ಲಿ ಪುಣೆಯ ಏಕ್ತಾ ನಗರ ಸೇರಿ ಹಲವೆಡೆ ರಕ್ಷಣ ಕಾರ್ಯಾಚರಣೆಗಾಗಿ ಸೇನಾ ಸಿಬಂದಿಯನ್ನು ನಿಯೋಜಿಸಲಾಗಿದೆ. ಏಕ್ತಾ ನಗರದ ಹಲವು ನಿವಾಸಿಗಳನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಣೆಕಟ್ಟಿನಿಂದ ರವಿವಾರ 35,000 ಕ್ಯುಸೆಕ್‌ ನೀರು ಬಿಡುಗಡೆ ಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಏಕ್ತ ನಗರದ ಸಿನ್ಹಾಗಢ ರಸ್ತೆಯಲ್ಲಿರುವ ದ್ವಾರಕ ಸೊಸೈಟಿಯಲ್ಲಿ ಸೇನಾ ಸಿಬಂದಿಯನ್ನು ನಿಯೋಜಿಸ ಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next