Advertisement

ವಿಜಯಪುರ ಜಿಲ್ಲೆಯ ಜಲಾಶಯಗಳು ಭರ್ತಿ : ಹೆಚ್ಚಿನ ನೀರು ಕೃಷ್ಣಾ ನದಿಗೆ

02:27 PM Jul 12, 2020 | sudhir |

ವಿಜಯಪುರ: ಜಿಲ್ಲೆಯ ಆಲಮಟ್ಟಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಹಾಗೂ ನಾರಾಯಣಪುರದ ಬಸವ ಸಾಗರ ಜಲಾಶಯಗಳಿಗೆ ಒಳಹರಿವು ಹೆಚ್ಚುತ್ತಿರುವ ಕಾರಣ ಜಲಾಶಯಗಳಿಂದ ಗೇಟ್ ಮೂಲಕ ಕೃಷ್ಣಾ ನದಿಗೆ ನೀರು ಹರಿ ಬಿಡಲಾಗುತ್ತಿದೆ.

Advertisement

ಶಾಸ್ತ್ರೀ ಜಲಾಶಯದಿಂದ 49 ಸಾವಿರ ಕ್ಯೂಸೆಕ್ ಹಾಗೂ ಬಸವ ಸಾಗರ ಜಲಾಶಯದಿಂದ 11 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುತ್ತಿದೆ.

ಕೃಷ್ಣಾ ಜಲಾನಯನ ಪರಿಸರದಲ್ಲಿ ಉತ್ತಮ‌ ಮಳೆ ಸುರಿಯುತ್ತಿದ್ದು, ನದಿಗೆ ನಿರ್ಮಿಸಿರುವ ಎಲ್ಲ ಜಲಾಶಯಗಳು ಬಹುತೇಕ ಭರ್ತಿಯಾಗಿವೆ. ಹೀಗಾಗಿ ಜಲಾಶಯಗಳಿಂದ ನದಿಗೆ ನೀರು ಹರಿಸಲಾಗುತ್ತಿದೆ.

ನದಿಗೆ ನೀರು ಬಿಡುತ್ತಿರುವ ಕಾರಣ ನದಿ ತೀರ ಪ್ರದೇಶದ ಜನರು ಸರಕ್ಷಿತ ಸ್ಥಳಕ್ಕೆ ತೆರಳುವಂತೆ ಕೃಷ್ಣಾ ಭಾಗ್ಯ ಜಲ ನಿಗಮ ಅಣೆಕಟ್ಟು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next