Advertisement

Puttur ಶಾಸಕರಿಗೆ ಅಭಿನಂದನೆ ಕೋರಿ ಅಳವಡಿಸಿದ್ದ ಬ್ಯಾನರ್‌ಗೆ ಹಾನಿ: ದೂರು

11:38 PM Jan 29, 2024 | Team Udayavani |

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿಯಲ್ಲಿ ಮಂಜೂರಾಗಿರುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಅವರಿಗೆ ಅಭಿನಂದನೆ ಸಲ್ಲಿಸಿ ಇಲ್ಲಿನ ಕೋರ್ಟ್‌ ರಸ್ತೆಯಲ್ಲಿ ಅಳವಡಿಸಿದ ಬ್ಯಾನರ್‌ಗೆ ಹಾನಿಗೊಳಿಸಲಾಗಿದೆ ಎಂದು ಪುತ್ತೂರು ನಗರ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ಮಹಮ್ಮದ್‌ ಆಲಿ ಅವರು ಪುತ್ತೂರು ನಗರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

Advertisement

ಕೋರ್ಟ್‌ ರಸ್ತೆಯಲ್ಲಿ ಈ ಹಿಂದೆ ನಡೆದ ಕಾಂಕ್ರಿಟೀಕರಣ ರಸ್ತೆ ಕಾಮಗಾರಿ ಕಳಪೆಯಾಗಿ ಅಲ್ಲಲ್ಲಿ ಕಾಂಕ್ರೀಟ್‌ ಕಿತ್ತು ಹೋಗಿ ಸಂಚಾರಕ್ಕೆ ತೊಂದರೆಯಾಗುತ್ತಿರುವುದಕ್ಕೆ ಆ ರಸ್ತೆಯನ್ನು ಸುಸಜ್ಜಿತವಾಗಿ ಅಭಿವೃದ್ಧಿಗೊಳಿಸುವ ಉದ್ದೇಶದಿಂದ ಕಾಂಕ್ರೀಟ್‌ ರಸ್ತೆ ಮೇಲೆ ವೈಟ್‌ ಟಾಪಿಂಗ್‌ ಮಾಡುವ ಕಾಮಗಾರಿಗೆ ಶಾಸಕ ಅಶೋಕ್‌ ಕುಮಾರ್‌ ರೈ ಅವರು 42 ಲಕ್ಷ ರೂ. ಅನುದಾನದ ಕಾಮಗಾರಿಯ ಶಂಕುಸ್ಥಾಪನೆ ಮಾಡಿದ್ದರು. ಅನುದಾನ ಮಂಜೂರು ಮಾಡಿರುವ ಶಾಸಕರಿಗೆ ಅಭಿನಂದನೆ ಸಲ್ಲಿಸುವ ಫ್ಲೆಕ್ಸ್‌ ಅನ್ನು ಮುಖ್ಯ ರಸ್ತೆಯಿಂದ ಕೋರ್ಟ್‌ ರಸ್ತೆಗೆ ತಿರುಗುವಲ್ಲಿ ನಗರ ಕಾಂಗ್ರೆಸ್‌ ವತಿಯಿಂದ ಅಳವಡಿಸಲಾಗಿತ್ತು.

ಈ ಫ್ಲೆಕ್ಸ್‌ ಅನ್ನು ರಾತ್ರಿ ಯಾರೋ ಕಿಡಿಗೇಡಿಗಳು ಹರಿದು ಹಾನಿಗೊಳಿಸಿದ್ದಾರೆ. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next