Advertisement

ಕಠಿನ ಕ್ರಮ ಕೈಗೊಳ್ಳಲು ಆದೇಶ

10:59 AM Jan 10, 2018 | Team Udayavani |

ನಾಟೆಕಲ್‌ : ಇಲ್ಲಿನ ಮಸೀದಿ ಮತ್ತು ಅಂಗಡಿಗೆ ಹಾನಿ ಮಾಡಿದ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿದ್ದಾರೋ ಅಥವಾ ಇದರ ಹಿಂದೆ ಯಾರದಾದರೂ ಕೈವಾಡ ಇದೆಯಾ ಎನ್ನುವ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದು, ಜನರು ಯಾವುದೇ ವದಂತಿಗಳಿಗೆ ಕಿವಿಕೊಡದೆ ಸಂಯಮದಿಂದ ವರ್ತಿಸಬೇಕು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ತಿಳಿಸಿದರು.

Advertisement

ಅವರು ನಾಟೆಕಲ್‌ನಲ್ಲಿ ಹಾನಿಗೀಡಾದ ಮಸೀದಿ ಮತ್ತು ಅಂಗಡಿಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿ, ಈ ವ್ಯಾಪ್ತಿಯಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಕೃತ್ಯಗಳು ನಡೆಯುತ್ತಿವೆ. ಊರಿನವರು ಅಹಿತಕರ ಘಟನೆಗೆ ಆಸ್ಪದ ನೀಡದೆ ಆರೋಪಿಗಳ ಪತ್ತೆಗೆ ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸಿರುವುದು ಶ್ಲಾಘನೀಯವಾಗಿದ್ದು, ಈಗಾಗಲೇ ಮುಖ್ಯಮಂತ್ರಿಗಳು ಜಿಲ್ಲಾಡಳಿತಕ್ಕೆ ಇಂತಹ ಘಟನೆಗಳಿಗೆ ಕಾರಣವಾದವ ಮೇಲೆ ಕಠಿನ ಕ್ರಮ ಕೈಗೊಳ್ಳಲು ಆದೇಶ ನೀಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಮಸೀದಿಯ ಮುಖ್ಯಸ್ಥರು, ನಾಟೆಕಲ್‌ನ ವರ್ತಕರು, ಉಳ್ಳಾಲ ಇನ್ಸ್‌ಪೆಕ್ಟರ್‌ ಗೋಪಿಕೃಷ್ಣ, ಕೊಣಾಜೆ ಇನ್ಸ್‌ಪೆಕ್ಟರ್‌ ಅಶೋಕ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next