Advertisement

ಟಿಪ್ಪು ಭಿತ್ತಿಚಿತ್ರಕ್ಕೆ ಹಾನಿ ಘಟನೆಯಿಂದ ಮನಸ್ಸಿಗೆ ನೋವಾಗಿದೆ: ಡಿಕೆ ಶಿವಕುಮಾರ್

09:34 AM Aug 14, 2022 | Team Udayavani |

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಟಿಪ್ಪು ಸುಲ್ತಾನ್ ಅವರ ಕಟೌಟನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಸರ್ಕಾರದ ಪುರಾತತ್ವ ಇಲಾಖೆ ಅಡಿಯಲ್ಲಿ ಟಿಪ್ಪು ಸುಲ್ತಾನ್ ಅರಮನೆಯಿದೆ. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಶೇಷ ಅಲಂಕಾರ ಮಾಡಿ ಆಚರಣೆ ಮಾಡಲಾಗುತ್ತಿದೆ. ಆ ಮೂಲಕ ಕೇಂದ್ರ ಸರ್ಕಾರ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ಮಾಡಿದವರಿಗೆ ಗೌರವ ನೀಡುತ್ತಿದೆ. ಆದರೂ ಈ ರೀತಿ ಘಟನೆಗಳು ನಡೆಯುತ್ತಿರುವುದು ಮನಸ್ಸಿಗೆ ನೋವು ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಭಿಪ್ರಾಯ ಪಟ್ಟಿದ್ದಾರೆ.

Advertisement

ಟಿಪ್ಪು ಸುಲ್ತಾನ್ ಭಾವಚಿತ್ರವನ್ನು ಹರಿದು ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಅಧಿಕಾರಿಗಳು ಇದ್ದರೂ ಅದನ್ನು ಹರಿದಿದ್ದಾರೆ. ಈ ವಿಚಾರವಾಗಿ ಪೊಲೀಸ್ ಅಧಿಕಾರಿಗಳ ಜತೆ ಮಾತನಾಡಿದ್ದೇನೆ. ಅವರು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಈ ಕೃತ್ಯ ಯಾರು ಎಸಗಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಕೂಡಲೇ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದೊಂದು ದೇಶದ ಪಾಲಿನ ಸಂಭ್ರಮದ ಸಂದರ್ಭ. ಈ ಸಮಯದಲ್ಲಿ ನಾವು ಶಾಂತಿ ಕಾಪಾಡಬೇಕು. ಕೆಲ ಕಿಡಿಗೇಡಿಗಳು ಈ ರೀತಿ ಮಾಡಿದ್ದಾರೆ ಎಂದು ನಾವು ವಿಚಲಿತರಾಗಬಾರದು ಎಂದರು.

ಇದನ್ನೂ ಓದಿ:“ಕಿಂಗ್ ಆಫ್ ಬುಲ್ ಮಾರ್ಕೆಟ್” ಶೇರು ಮಾರುಕಟ್ಟೆ ದಿಗ್ಗಜ ರಾಕೇಶ್ ಜುಂಜುನ್‌ವಾಲಾ ಇನ್ನಿಲ್ಲ

ಟಿಪ್ಪು ಅವರ ಸ್ಮರಣೆ ಅಲ್ಪಸಂಖ್ಯಾತರ ಓಲೈಕೆ ಎಂಬ ಬಿಜೆಪಿ ಆರೋಪದ ಬಗ್ಗೆ ಕೇಳಿದ ಪ್ರಶ್ನೆಗೆ, ಸ್ವಾತಂತ್ರ್ಯಕ್ಕಾಗಿ ಎಲ್ಲಾ ಸಮುದಾಯದವರೂ ಹೋರಾಟ ಮಾಡಿದ್ದಾರೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಡುವ ವಿಚಾರ ಹೋರಾಟಗಾರರಲ್ಲಿ ಇತ್ತು, ಜಾತಿ ಧರ್ಮದ ವಿಚಾರ ಅಲ್ಲ ಎಂದು ತಿರುಗೇಟು ನೀಡಿದರು.

Advertisement

ಈ ವಿಚಾರವಾಗಿ ದೂರು ದಾಖಲಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ,  ನಾವು ದೂರು ನೀಡುವ ಅಗತ್ಯವಿಲ್ಲ. ಪೊಲೀಸರು ಸ್ಥಳದಲ್ಲೇ ಇದ್ದರು.  ಅವರು ಕ್ರಮ ಕೈಗೊಳ್ಳಬೇಕು ಎಂದರು.

ಆ.15 ರ ಮಧ್ಯಾಹ್ನ ನಡೆಯಲಿರುವ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮಕ್ಕೆ ಮೆಟ್ರೋ ಸಂಸ್ಥೆ ಎಲ್ಲಾ ಸಹಕಾರ ನೀಡಿದೆ. ನಾವು ಪಕ್ಷದ ವತಿಯಿಂದ ಹಣ ಪಾವತಿಸಿ ಟಿಕೆಟ್ ಖರೀದಿ ಮಾಡಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸುವವರಿಗೆ ಉಚಿತವಾಗಿ ನೀಡುತ್ತಿದ್ದೇವೆ. ಬೆಂಗಳೂರಿಗೆ ವಿವಿಧ ಭಾಗಗಳಿಂದ ಬರುವವರು ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಲು ಹಾಗೂ ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯದ ನಂತರ ಹಿಂದಿರುಗಲು ಮೆಟ್ರೋ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಇದನ್ನು ಎಲ್ಲಾ ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next