Advertisement

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಚ್.ಕೆ. ಪಾಟೀಲ್ ಭೇಟಿ

10:19 PM Jun 15, 2024 | Team Udayavani |

ಗದಗ: ಮಳೆಯಿಂದ ಹಾನಿಗೊಳಗಾದ ಗದಗ ತಾಲೂಕಿನ ಹಲವು ಪ್ರದೇಶಗಳಿಗೆ ಪ್ರವಾಸೋದ್ಯಮ ಮತ್ತು ಕಾನೂನು ಸಚಿವ ಎಚ್.ಕೆ. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Advertisement

ಮುಳಗುಂದ ಕುರ್ತಕೋಟಿ ರಸ್ತೆಯಲ್ಲಿ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಹಾನಿಗೊಳಗಾದ ರಸ್ತೆ ಭಾರಿ ಪ್ರಮಾಣದ ನೀರು ಹರಿಯುವಿಕೆಯಿಂದಾಗಿ ರಸ್ತೆ ಪಕ್ಕದಲ್ಲಿ ಮಣ್ಣು ಕೊಚ್ಚಿ ಹೋಗಿದ್ದು ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿದೆ. ಅಲ್ಲದೆ ನೀಲಗುಂದ ಕುರ್ತಕೋಟಿ ರಸ್ತೆ ಸಂಪೂರ್ಣ ಹಾಳಾಗಿದ್ದು ಕೂಡಲೇ ದುರಸ್ತಿ ಮಾಡುವ ಅನಿವಾರ್ಯತೆ ಇದೆ ಎಂದು ಸ್ಥಳೀಯ ಮುಖಂಡರಾದ ಅಪ್ಪಣ್ಣ ಇನಾಮತಿ ಸಚಿವರಾದ ಎಚ್.ಕೆ. ಪಾಟೀಲ ಅವರಿಗೆ ವಿವರಿಸಿದರು.

ನಂತರ ಅಂತೂರ ಬೆಂತೂರ ಗ್ರಾಮದ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಗದಗ ತಾಲೂಕಿನ ಹಾನಿಯಾದ ಮುಳಗುಂದ ಹಾಗೂ ಇತರೆ ಪ್ರದೇಗಳ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಅಪ್ಪಣ್ಣ ಇನಾಮತಿ, ಅಶೋಕ ಮಂದಾಲಿ ಸೇರಿದಂತೆ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next