Advertisement

Dandathirtha: ಮನೆಯಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟಿ ಕಳವು

10:17 PM Oct 14, 2023 | Team Udayavani |

ಕಾಪು: ಉಳಿಯಾರಗೋಳಿ ದಂಡತೀರ್ಥ ಶಾಲೆ ಬಳಿಯ ಮನೆಯೊಂದರಲ್ಲಿ ನಿಲ್ಲಿಸಿದ್ದ ಸ್ಕೂಟಿಯೊಂದನ್ನು ಕಳ್ಳರು ಕದ್ದೊಯ್ದ ಘಟನೆ ಅ. 13ರಂದು ಬೆಳಗ್ಗೆ ಬೆಳಕಿಗೆ ಬಂದಿದೆ.

Advertisement

ಸ್ಥಳೀಯ ನಿವಾಸಿ ಪ್ರವೀಣ್‌ ಎಂಬವರ ಮಗ ತೇಜಸ್‌ ಕೆಎ 20 ಇಡಿ 6652 ಸಂಖ್ಯೆಯ ಹೋಂಡಾ ಆಕ್ಟೀವಾ ಸ್ಕೂಟಿಯನ್ನು ಅ. 12ರಂದು ರಾತ್ರಿ ತಮ್ಮ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದು ಅ. 13ರಂದು ಬೆಳಿಗ್ಗೆ ಬಂದು ನೋಡುವಾಗ ಕಾಣೆಯಾಗಿತ್ತು.

ಸುಮಾರು 20 ಸಾವಿರ ರೂಪಾಯಿ ಮೌಲ್ಯದ ಹೋಂಡಾ ಆಕ್ಟೀವಾ ಸ್ಕೂಟಿಯನ್ನು ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿರುವುದಾಗಿ ಕಾಪು ಪೊಲೀಸ್‌ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next