Advertisement

ದಂಡತೀರ್ಥ : ಸ್ವತ್ಛತಾ ಮಾಹಿತಿ, ಸಮ್ಮಾನ

04:54 PM Mar 06, 2017 | Team Udayavani |

ಕಾಪು: ಕಾಪು ದಂಡತೀರ್ಥ ವಿದ್ಯಾ ಸಂಸ್ಥೆಯಲ್ಲಿ ಪರಿಸರ ಸ್ವಚ್ಚತಾ ಮಾಹಿತಿ ಮತ್ತು ಅಭಿನಂದನಾ ಕಾರ್ಯಕ್ರಮವು ಫೆ. 27ರಂದು ವಿದ್ಯಾ ಸಂಸ್ಥೆಯ ಸಂಚಾಲಕ ಡಾ| ಕೆ. ಪ್ರಭಾಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

Advertisement

ಕಾಪು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಅವರು ಪರಿಸರ ಸ್ವತ್ಛತಾ ಕುರಿತು ವಿದ್ಯಾಸಂಸ್ಥೆಯ ಶಿಕ್ಷಕ ವೃಂದಕ್ಕೆ ಮಾರ್ಗದರ್ಶನ ನೀಡಿದರು. ಕಾಪು ಪುರಸಭೆಯ ಮುಖ್ಯಾಧಿಕಾರಿ ರಾಯಪ್ಪ ಮತ್ತು ಕಾಪು ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಇವರನ್ನು ಸಮ್ಮಾನಿಸಿ ಅಭಿನಂದಿಸಲಾಯಿತು. ಜಿಲ್ಲಾ ಗಹರಕ್ಷಕ ದಳದ ಕಮಾಂಡೆಂಟ್‌ ಡಾ| ಕೆ. ಪ್ರಶಾಂತ್‌ ಶೆಟ್ಟಿ, ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥರುಗಳಾದ ಚಿತ್ರಲೇಖ ಶೆಟ್ಟಿ, ವಾರಿಜಾ ಉಪಸ್ಥಿತರಿದ್ದರು.

ಆಡಳಿತಾಧಿಕಾರಿ ಆಲ್ಬನ್‌ ರೋಡ್ರಿಗಸ್‌ ಸ್ವಾಗತಿಸಿದರು. ಸಂಸ್ಥೆಯ ಪ್ರಾಂಶುಪಾಲ ನೀಲಾನಂದ ನಾಯ್ಕ ಅಭಿನಂದನಾ ಭಾಷಣ ಮಾಡಿದರು. ದೆ„. ಶಿ. ಶಿಕ್ಷಕ ಪ್ರಭಾಕರ ಶೆಟ್ಟಿ ವಂದಿಸಿದರು. ಪುರಸಭಾ ಸ್ವತ್ಛತಾ ರಾಯಭಾರಿ ಶಿವಣ್ಣ ಬಾಯಾರ್‌ ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next