Advertisement

Dandeli: ಪ್ರವಾಸಕ್ಕೆಂದು ಬಂದಿದ್ದ ಬೀದರ್ ನ ವ್ಯಕ್ತಿಗೆ ಹೃದಯಾಘಾತ, ಮೃತ್ಯು

11:19 AM May 12, 2024 | Team Udayavani |

ದಾಂಡೇಲಿ: ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದ ಪ್ರವಾಸಿಗನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಮೇ.11ರ ಶನಿವಾರ ರಾತ್ರಿ ನಡೆದಿದೆ.

Advertisement

ಬೀದರ್ ಜಿಲ್ಲೆಯ ಹುಮ್ನಾಬಾದ್‌ ನ ನಿವಾಸಿ ಪವನ್ ಕುಮಾರ್ (40) ಮೃತಪಟ್ಟ ದುರ್ದೈವಿ.

ಈತ 7-8 ಜನರ ತಂಡದ ಜೊತೆ ಪ್ರವಾಸಕ್ಕೆಂದು ದಾಂಡೇಲಿಗೆ ಆಗಮಿಸಿದ್ದನು. ಈ ತಂಡ ನಗರದ ಸಮೀಪದಲ್ಲಿರುವ ಹೋಂ ಸ್ಟೇವೊಂದರಲ್ಲಿ ತಂಗಿತ್ತು.

ಪವನ್ ಅವರಿಗೆ ಶನಿವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಆತನನ್ನು ದಾಂಡೇಲಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರಲಾಗಿದೆ. ಆದರೆ ಅದಾಗಲೇ ಆತ ಹೃದಯಘಾತದಿಂದ ಸಾವನ್ನಪ್ಪಿದ್ದಾನೆ.

ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣ ಅರಕೇರಿ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next