Advertisement

Dandeli: ವಿವಾಹಿತ ವ್ಯಕ್ತಿ ಆತ್ಮಹತ್ಯೆ

11:53 AM Sep 03, 2023 | Team Udayavani |

ದಾಂಡೇಲಿ: ವಿವಾಹಿತ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಾಂಧಿನಗರದ ಆಶ್ರಯ ಕಾಲೋನಿಯಲ್ಲಿ ಸೆ.3ರ ಭಾನುವಾರ ಬೆಳಿಗ್ಗೆ ನಡೆದಿರುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.

Advertisement

ಗಾಂಧಿನಗರದ ಆಶ್ರಯ ಕಾಲೋನಿಯ ಕೃಷ್ಣ ಬಾಬನಿ ಕಂಜರಭಾಟ್ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಈತ ವಿಪರೀತ ಕುಡಿತದ ಚಟ ಹೊಂದಿದ್ದನು ಎನ್ನಲಾಗಿದ್ದು, ಆಶ್ರಯ ಕಾಲೋನಿಯಲ್ಲಿರುವ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಈ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next