Advertisement

Dandeli: ಜೀವನದಲ್ಲಿ ಜಿಗುಪ್ಸೆ; ನೇಣಿಗೆ ಶರಣಾದ ಯುವಕ

03:04 PM Feb 02, 2024 | Team Udayavani |

ದಾಂಡೇಲಿ: ನಗರದ ಸಮೀಪದಲ್ಲಿರುವ ಜನತಾ ಕಾಲೋನಿಯಲ್ಲಿ ನಿರ್ಮಾಣದ ಹಂತದಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ಅವಿವಾಹಿತ ಯುವಕನೋರ್ವ ನೇಣಿಗೆ ಶರಣಾದ ಘಟನೆ ಫೆ. 2ರ ಶುಕ್ರವಾರ ನಡೆದಿದೆ.

Advertisement

ಸ್ಥಳೀಯ ಜನತಾ ಕಾಲೋನಿಯ ನಿವಾಸಿ ಆಕಾಶ್ ಸುರೇಶ ಮೇದಾರ (29) ನೇಣಿಗೆ ಶರಣಾದ ಯುವಕ.

ಅತಿಯಾದ ಕುಡಿತದ ಚಟ ಹೊಂದಿದ್ದ ಈತ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ತನ್ನ ನಿರ್ಮಾಣದ ಹಂತದ ಮನೆಯ ಕೊಠಡಿಯೊಳಗಡೆಯೇ ನೇಣಿಗೆ ಕೊರೊಳೊಡ್ಡಿದ್ದಾನೆ.

ಘಟನಾ ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸ್ಐ ಕೃಷ್ಣ ಅರಕೇರಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next