Advertisement

Dandeli: ಅರಣ್ಯ ಪ್ರದೇಶದಲ್ಲಿ ಆನೆ ದಾಳಿ : ಓರ್ವನಿಗೆ ಗಾಯ, ಚಿಕಿತ್ಸೆಗೆ ದಾಖಲು

04:45 PM Jul 03, 2024 | Team Udayavani |

ದಾಂಡೇಲಿ: ಬೆಳ್ಳಂ ಬೆಳಗ್ಗೆ ಎಮ್ಮೆಗಳನ್ನು ಮೇಯಿಸಲೆಂದು ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ಕಾಡಾನೆಯೊಂದು ದಾಳಿ ನಡೆಸಿ ಪವಾಡ ಸದೃಶ್ಯವಾಗಿ ಪಾರದ ಘಟನೆ ಜು. 3ರ ಬುಧವಾರ ಬೆಳಿಗ್ಗೆ ತಾಲೂಕಿನ ನಾನಾಕೆ ಸರೋಡಾದ ಅರಣ್ಯ ಪ್ರದೇಶದಲ್ಲಿ ನಡೆದಿದೆ.

Advertisement

ನಾನಾಕೆ ಸರೋಡಾದ ನಿವಾಸಿ ಮಹೇಶ ಜಾನು ಪಾಟೀಲ (56) ಆನೆ ದಾಳಿಗೊಳಗಾದ ವ್ಯಕ್ತಿ.

ಮಹೇಶ ಹಾಗೂ ಆತನ ಪತ್ನಿ ಬೆಳಿಗ್ಗೆ ಎಮ್ಮೆಗಳನ್ನು ಮೇಯಿಸಲೆಂದು ಮನೆ ಬಳಿಯ ಅರಣ್ಯ ಪ್ರದೇಶಕ್ಕೆ ಹೋಗಿದ್ದರು. ಈ ಸಮಯದಲ್ಲಿ ಕಾಡಾನೆಯೊಂದು ಇವರ ಮೇಲೆ ದಾಳಿ ಮಾಡಿದೆ. ಆನೆ ದಾಳಿಯಿಂದ ಮಹೇಶ ಅವರ ಕೈಗೆ ಬಲವಾದ ಗಾಯವಾಗಿದ್ದು, ಸಣ್ಣಪುಟ್ಟ ಗಾಯಗಳು ಕೂಡಾ ಆಗಿದ್ದು, ಅದೃಷ್ಟವಶಾತ್ ಜೀವಪಾಯದಿಂದ ಪಾರಾಗಿದ್ದಾರೆ.

ಆನೆ ದಾಳಿಯಿಂದ ಗಾಯಗೊಂಡಿದ್ದ ಇವರನ್ನು ಸ್ಥಳೀಯರು ನಗರದ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ಕರೆತಂದಿದ್ದಾರೆ.

ಸಾರ್ವಜನಿಕ ಆಸ್ಪತ್ರೆಗೆ ಬರ್ಚಿ ಅರಣ್ಯ ಇಲಾಖೆಯ ವಲಯಾರಣ್ಯಾಧಿಕಾರಿ ಆಶೋಕ್ ಶೆಳ್ಳೆನ್ನವರ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಆಲೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಲಕ್ಷ್ಮಣ ಜಾಧವ್ ಭೇಟಿ ನೀಡಿದ್ದಾರೆ. ‌

Advertisement

ದಾಂಡೇಲಿ ಗ್ರಾಮೀಣ ಪೊಲೀಸರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next