Advertisement

ದಾಂಡೇಲಿ :  ಅಪರಿಚಿತ ವಾಹನ ಡಿಕ್ಕಿ : ಪಾದಚಾರಿ ಸಾವು

08:48 PM Oct 17, 2021 | Team Udayavani |

ದಾಂಡೇಲಿ : ಅಪರಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ದಾಂಡೇಲಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಇಲ್ಲಿಯ ಜೊಯಿಡಾ ತಾಲೂಕಿನ ಪ್ರಧಾನಿ ಗ್ರಾಮದ ಸಮೀಪದಲ್ಲಿರುವ ಉಸೇಲಿ ಗ್ರಾಮದ ಕಡೆಗೆ ಹೋಗುವ ರಸ್ತೆಯಲ್ಲಿ ಸಿಗುವ ಒಂದನೆ ಕ್ರಾಸ್ ರಸ್ತೆಯ ಹತ್ತಿರ ಶನಿವಾರ ರಾತ್ರಿ ಈ ಅಪಘಾತ ನಡೆದಿದೆ. ಉಸೇಲಿ ಗ್ರಾಮದ ನಿವಾಸಿ ಆನಂದ ನಾರಾಯಣ ಮೋರೆ (ವ:46) ಮೃತಪಟ್ಟ ದುರ್ದೈವ್ಯಿ.

ಅತೀ ವೇಗದ ಚಾಲನೆಯಿಂದ ಅಪಘಾತವಾಗಿರಬಹುದೆಂದು ಮೇಲ್ನೋಟಕ್ಕೆ ಕಂಡು ಬಂದಿದೆ. ಮೃತ ವ್ಯಕ್ತಿಯ ಶವವನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಅಪಘಾತದ ಬಗ್ಗೆ ಮೃತರ ಸಹೋದರ ರಾಮಚಂದ್ರ ನಾರಾಯಣ ಮೋರೆಯವರು ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಬಗ್ಗೆ ದಾಂಡೇಲಿ ಗ್ರಾಮೀಣ ಠಾಣೆಯ ಪಿಎಸೈ ಐ.ಆರ್.ಗಡ್ಡೇಕರ ಅವರು ತನಿಖೆ ಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next