Advertisement

Dandeli: ಗಣೇಶನಗರದಲ್ಲಿ ವಿವಾಹಿತ ಮಹಿಳೆ ನಾಪತ್ತೆ: ದೂರು ದಾಖಲು

08:03 PM Sep 27, 2024 | Team Udayavani |

ದಾಂಡೇಲಿ: ನಗರದ ಗಣೇಶನಗರದ ನಿವಾಸಿಯಾಗಿರುವ ವಿವಾಹಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಬಗ್ಗೆ ನಗರ ಠಾಣೆಯಲ್ಲಿ ಶುಕ್ರವಾರ (ಸೆ.27) ದೂರು ದಾಖಲಾಗಿದೆ.

Advertisement

ಸ್ಥಳೀಯ ಗಣೇಶನಗರದ ನಿವಾಸಿ 41 ವರ್ಷದ ವಯಸ್ಸಿನ ರೇಖಾ ಶಿವಾನಂದ ಕಂಬಾರಗಣವಿ ಎಂಬವರೇ ನಾಪತ್ತೆಯಾಗಿರುವ ವಿವಾಹಿತ ಮಹಿಳೆಯಾಗಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದರು. ಇವರು ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರ ಹೋದವರು ಈವರೆಗೆ ಮನೆಗೆ ಬಾರದೇ ಇದ್ದ ಹಿನ್ನೆಲೆಯಲ್ಲಿ ಅಲ್ಲಿ ಇಲ್ಲಿ ಹುಡುಕಾಡಿಯೂ ಯಾವುದೇ ಸುಳಿವು ಲಭ್ಯವಾಗಿರುವುದಿಲ್ಲ. ಈ ಬಗ್ಗೆ ಇವರ ಪತಿ ಶಿವಾನಂದ ಮಹಾಬಲೇಶ್ವರ ಕಂಬಾರಗಣವಿ ಇವರು ನಗರ ಠಾಣೆಯಲ್ಲಿ ದೂರು ನೀಡಿದ್ದು, ದೂರಿನಲ್ಲಿ ಕಾಳಿ ನದಿಯ ಸೇತುವೆ ಮೇಲಿನಿಂದ ಹಾರಿ ನದಿಗೆ ಬಿದ್ದಿರಬಹುದು ಎನ್ನುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ನಗರ ಠಾಣೆಯ ಪೊಲೀಸರು ದೂರನ್ನು ಸ್ವೀಕರಿಸಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next