Advertisement

Dandeli: ಐವರು ವಿದ್ಯಾರ್ಥಿಗಳು ಪ್ರತಿಷ್ಟಿತ ಟಿಸಿಎಸ್ ಕಂಪೆನಿಗೆ ಉದ್ಯೋಗಕ್ಕೆ ಆಯ್ಕೆ

03:14 PM Jun 17, 2023 | Team Udayavani |

ದಾಂಡೇಲಿ: ನಗರದ ಬಂಗೂರನಗರ ಪದವಿ ಮಹಾವಿದ್ಯಾಲಯದ ಅಂತಿಮ ವರ್ಷದ ಪದವಿ ವಿಭಾಗದ ಐವರು ವಿದ್ಯಾರ್ಥಿಗಳು ಪ್ರತಿಷ್ಟಿತ ಟಿಸಿಎಸ್ ಕಂಪೆನಿಯ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ.

Advertisement

ಹುಬ್ಬಳ್ಳಿಯಲ್ಲಿ ನಡೆದ ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದ ಕಾಲೇಜಿನ ಅಂತಿಮ ವರ್ಷದ ಬಿ.ಎಸ್ಸಿ ಪದವಿ ವಿದ್ಯಾರ್ಥಿಗಳಾದ ವೀಣಾ ಪಾಟೀಲ್, ಸೇಜಲ್ ಶರ್ಮಾ ಮತ್ತು ಬಿ.ಕಾಂ ಪದವಿ ವಿದ್ಯಾರ್ಥಿಗಳಾದ ಸೋನಲ್ ಮಾನಗೆ, ರುಕ್ಸಾರ್ ಹತೇಲಿ, ತುಷಾರ್ ನಾಯ್ಕ ಪ್ರತಿಷ್ಟಿತ ಕಂಪೆನಿಗಳಲ್ಲಿ ಒಂದಾಗಿರುವ ಟಾಟಾ ಕನ್ಸಲ್ಟೇಶನ್ ಸರ್ವಿಸ್ ಕಂಪೆನಿಯಲ್ಲಿ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ ಎಂದು ಬಂಗೂರನಗರ ಪದವಿ ಮಹಾ ವಿದ್ಯಾಲಯದ ಪ್ಲೇಸ್ ಮೆಂಟ್ ಅಧಿಕಾರಿ ಡಾ.ವಿಜಯ್ ತೇಲಿಯವರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಪ್ರಾಚಾರ್ಯ ಡಾ.ಬಿ.ಎಲ್.ಗುಂಡೂರ್ ಹಾಗೂ ಬೋಧಕ ಮತ್ತು ಬೋಧಕೇತರ ವೃಂದ ಹರ್ಷ ವ್ಯಕ್ತಪಡಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next