Advertisement

Dandeli: ಶ್ರಾವಣದ ಕೊನೆ ಸೋಮವಾರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಂದ ವಿಶೇಷ ಪೂಜೆ

02:25 PM Sep 11, 2023 | Team Udayavani |

ದಾಂಡೇಲಿ: ನಗರ ಪೊಲೀಸ್ ಠಾಣೆ ಮತ್ತು ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕುಟುಂಬಸ್ಥರ ಸಂಯುಕ್ತ ಆಶ್ರಯದಲ್ಲಿ ಶ್ರಾವಣದ ಕೊನೆಯ ಸೋಮವಾರದ ನಿಮಿತ್ತ ಸೆ.11ರ ಸೋಮವಾರ ಶ್ರೀ ಕ್ಷೇತ್ರ ಪುರಮಾರು ಶ್ರೀ. ದಾಂಡೇಲಪ್ಪನಿಗೆ ವಿಶೇಷ ಪೂಜೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

Advertisement

ದಾಂಡೇಲಿ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ನಗರ ಠಾಣೆ, ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮತ್ತು ಕುಟುಂಬಸ್ಥರು ಮೆರವಣಿಗೆಯ ಮೂಲಕ ನಗರದ ಮಿರಾಶಿಗಲ್ಲಿಯಲ್ಲಿರುವ ಶ್ರೀ ದಾಂಡೇಲಪ್ಪನ ಸನ್ನಿಧಿಗೆ ತೆರಳಿದರು.

ಪ್ರತಿ ವರ್ಷವೂ ಶ್ರಾವಣ ತಿಂಗಳ ಕೊನೆಯ ಸೋಮವಾರ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಅವರ ಕುಟುಂಬಸ್ಥರು ಸೇರಿ ಶ್ರೀ ದಾಂಡೇಲಪ್ಪನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ರೂಢಿಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ.

ಅಂತೆಯೇ ಈ ವರ್ಷದ ಶ್ರಾವಣ ಮಾಸದ ಕೊನೆಯ ಸೋಮವಾರವಾದ ಇಂದು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಪೊಲೀಸ್ ಕುಟುಂಬಸ್ಥರು ಸೇರಿ ವಿಶೇಷ ಪೂಜಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next