Advertisement

Dandeli: ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ… ಓರ್ವನ ಬಂಧನ

01:46 PM Sep 22, 2023 | Team Udayavani |

ದಾಂಡೇಲಿ : ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ನಗರದ ಸೋಮಾನಿ ವೃತ್ತದ ಹತ್ತಿರದಲ್ಲಿರುವ ಶ್ರೀ ಛತ್ರಪತಿ ಶಿವಾಜಿ ಮೂರ್ತಿಯ ಕಾಲಿಗೆ ಹಾನಿಗೊಳಿಸಿದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

Advertisement

ಶ್ರೀ.ಛತ್ರಪತಿ ಶಿವಾಜಿ ಮೂರ್ತಿ ಆವರಣದಲ್ಲಿ ಪ್ರತಿಷ್ಟಪಾಪಿಸಲಾಗಿರುವ ಗಣೇಶ ಮೂರ್ತಿಗೆ ಪೂಜೆ ನಡೆಯುತ್ತಿರುವ ಸಂದರ್ಭದಲ್ಲಿ ಸ್ಥಳೀಯ ಟೌನಶಿಪ್ ನಿವಾಸಿಯಾಗಿರುವ ಪ್ಯಾರಸಿಂಗ್ ರಜಪೂತ್ ಎಂಬಾತನು ಕುಡಿದ ಮತ್ತಿನಲ್ಲಿ ಛತ್ರಪತಿ ಶಿವಾಜಿ ಮೂರ್ತಿಯ ಕಾಲಿಗೆ ತೊಡಿಸಲಾಗಿರುವ ಬಂಗಾರದ ಬಣ್ಣದ ಪಾದರಕ್ಷೆಯನ್ನು ಕೀಳಲು ಪ್ರಯತ್ನಿಸಿದ್ದಾನೆ. ಕೈಯಲ್ಲಿ ಕೀಳಲು ಆಗದೇ ಇದ್ದಾಗ, ಅಲ್ಲೆ ಇದ್ದಂತಹ ಕಬ್ಬಿಣದ ರಾಡ್ ನಲ್ಲಿ ಪಾದರಕ್ಷೆಯನ್ನು ಕೀಳಲು ಪ್ರಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಶಿವಾಜಿ ಮೂರ್ತಿಗೆ ಸ್ವಲ್ಪ ಪ್ರಮಾಣದ ಹಾನಿಯಾಗಿದೆ.

ಮೂರ್ತಿಗೆ ಹಾನಿಗೊಳಿಸಿದ ವಿಚಾರ ತಿಳಿದ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ್ ಜಾಧವ್, ಪ್ರಮುಖರುಗಳಾದ ರವಿ ಸುತಾರ್, ಸಂತೋಷ್ ಸೋಮನಾಚೆ ಸೇರಿದಂತೆ ಸಮಿತಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಪ್ಯಾರಸಿಂಗ್ ರಜಪೂತ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಘಟನೆ ನಡೆದ ತಕ್ಷಣವೆ ಛತ್ರಪತಿ ಶಿವಾಜಿ ಮೂರ್ತಿ ಹತ್ತಿರ ಜನ ಜಮಾಯಿಸಿದ್ದರು. ಕುಡಿದ ಮತ್ತಿನಲ್ಲಿ ನಡೆದಿರುವ ಘಟನೆಯಾಗಿದ್ದು, ಶಿವಾಜಿ ಮೂರ್ತಿಯ ಕಾಲಿನಲ್ಲಿದ್ದ ಬಂಗಾರದ ಬಣ್ಣದ ಪಾದರಕ್ಷೆ ಅದು ಬಂಗಾರದ್ದೇ ಇರಬಹುದೆಂದು ಭಾವಿಸಿ ಪಾದರಕ್ಷೆಯನ್ನು ಕೀಳಲು ಪ್ರಯತ್ನ ಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ಎಷ್ಟೇ ಕುಡಿದಿದ್ದರೂ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾಗೂ ಜನರ ಭಾವನೆಗಳಿಗೆ ಧಕ್ಷೆಯಾಗುವಂತಹ ಕುಕೃತ್ಯ ಮಾಡುವುದು ತಪ್ಪು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು, ಸೂಕ್ತ ರೀತಿಯ ಕ್ರಮವನ್ನು ಕೈಗೊಳ್ಳಬೇಕೆಂದು ಶ್ರೀ ಛತ್ರಪತಿ ಶಿವಾಜಿ ಮೂರ್ತಿ ಪ್ರತಿಷ್ಟಾಪನಾ ಸಮಿತಿಯ ಅಧ್ಯಕ್ಷರಾದ ವಿಶ್ವನಾಥ ಜಾಧವ್, ಸಂತೋಷ್ ಸೋಮನಾಚೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: Actor: ಶೂಟಿಂಗ್‌ ದುರಂತದಲ್ಲಿ 30 ವರ್ಷಗಳ ಕಾಲ ಹಾಸಿಗೆ ಹಿಡಿದಿದ್ದ ತಮಿಳು ನಟ ಬಾಬು ವಿಧಿವಶ

Advertisement
Advertisement

Udayavani is now on Telegram. Click here to join our channel and stay updated with the latest news.

Next