Advertisement

Dandeli: ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ನ ಶ್ರೀನಿವಾಸ್ ಕೊಳಚಿ ನಿಧನ

07:55 PM Sep 11, 2023 | Team Udayavani |

 ದಾಂಡೇಲಿ : ಅಂಬಿಕಾನಗರದ ಕೆಪಿಸಿಯ ಹಿರಿಯ ತಾಂತ್ರಿಕ ಸಿಬಂದಿ ಹಾಗೂ ಕೆಪಿಸಿ ಎಂಪ್ಲಾಯಿಸ್ ಯೂನಿಯನ್ ನ ಪ್ರಧಾನ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕೊಳಚಿಯವರು ಸೋಮವಾರ ವಿಧಿವಶರಾದರು.

Advertisement

ಕಳೆದ 25 ವರ್ಷಗಳಿಗಿಂತಲೂ ಹೆಚ್ಚು ವರ್ಷಗಳಿಂದ ಅಂಬಿಕಾನಗರದ ಕೆಪಿಸಿಯಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದು, ಕಳೆದ ಹಲವು ವರ್ಷಗಳಿಂದ ಕೆಪಿಸಿ ಎಂಪ್ಲಾಯಿಸ್ ಯೂನಿಯನಿನ ಪ್ರಧಾನ ಕಾರ್ಯದರ್ಶಿಯಾಗಿ ಅನುಪಮ ಸೇವೆಯನ್ನು ಸಲ್ಲಿಸುತ್ತಿದ್ದರು. ಸಾಮಾಜಿಕ, ಧಾರ್ಮಿಕ ಸೇವಾ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದ ಶ್ರೀನಿವಾಸ್ ಕೊಳಚಿಯವರು ಅತ್ಯುತ್ತಮ ಕ್ರಿಕೆಟರ್ ಆಗಿ ಜನಖ್ಯಾತಿಯನ್ನು ಹೊಂದಿದ್ದರು.

ಕಳೆದ ಒಂದು ವಾರದಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಕೊಳಚಿಯವರು ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದರು. ಅಂತಿಮವಾಗಿ ಇಂದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾದರು. ಮೃತರು ಮೂಲತ: ಬಾಗಲಕೋಟೆ ಜಿಲ್ಲೆಯ ತುಳಸಿಗಿರಿಯವರಾಗಿದ್ದು, ಅಂಬಿಕಾನಗರದ ಕೆಪಿಸಿ ವಸತಿ ಗೃಹದಲ್ಲಿ ಕುಟುಂಬ ಸಮೇತರಾಗಿ ವಾಸವಾಗಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯನ್ನು ಹಾಗೂ ಅಪಾರ ಸಂಖ್ಯೆಯಲ್ಲಿ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ನಿಧನಕ್ಕೆ ಕೆಪಿಸಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಗಣ್ಯರನೇಕರು ಕಂಬನಿ ಮಿಡಿದು ಸಂತಾಪವನ್ನು ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next