Advertisement

Dandeli: ಹೃದಯಾಘಾತದಿಂದ ಮೃತಪಟ್ಟ ಪ್ರವಾಸಿಗ

01:19 PM Jun 12, 2023 | Team Udayavani |

ದಾಂಡೇಲಿ: ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿಯೊರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಜೂ.11ರ ಭಾನುವಾರ ತಡರಾತ್ರಿ ನಡೆದಿದೆ.

Advertisement

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸ್ವಾಲಿನ್ ಶಂಸುದ್ದೀನ್ ಹಾದ್ನೀರ್ (37) ಮೃತಪಟ್ಟ ವ್ಯಕ್ತಿ.

ಈತ ತನ್ನ ಸಂಗಡಿಗರೊಂದಿಗೆ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದನು ಎನ್ನಲಾಗಿದೆ. ಹೃದಯಾಘಾತಕ್ಕೊಳಗಾದ ಈತನನ್ನು ತಕ್ಷಣವೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಬರುವಷ್ಟರಲ್ಲಿ ಮೃತಪಟ್ಟಿದ್ದ ಎನ್ನಲಾಗಿದೆ.

ಸಾರ್ವಜನಿಕ ಆಸ್ಪತ್ರೆಗೆ ದಾಂಡೇಲಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next