Advertisement

ಅಯ್ಯಪ್ಪ ಬೆಟ್ಟದಲ್ಲಿ ಅಪಾಯಕಾರಿ ಬಿರುಕು

12:10 AM Aug 15, 2019 | Team Udayavani |

ಮಡಿಕೇರಿ: ಧಾರಾಕಾರ ಮಳೆಯಿಂದ ಕೊಡಗಿನ ವೀರಾಜಪೇಟೆಯ ಅಯ್ಯಪ್ಪ ಬೆಟ್ಟದಲ್ಲಿ ಅಪಾಯಕಾರಿ ಬಿರುಕು ಕಾಣಿಸಿಕೊಂಡಿದ್ದು, ಆತಂಕ ಸೃಷ್ಟಿಯಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ 50ಕ್ಕೂ ಹೆಚ್ಚು ಕುಟುಂಬಗಳನ್ನು ಸ್ಥಳಾಂತರಿಸಿದೆ.

Advertisement

ಮತ್ತೊಂದು ಮೃತದೇಹ ಪತ್ತೆ: ವೀರಾಜಪೇಟೆಯ ತೋರ ಗ್ರಾಮದಲ್ಲಿ ಮಣಿಪಾರೆ ಬೆಟ್ಟ ಕುಸಿದು ಮೃತಪಟ್ಟಿದ್ದ ಅಪ್ಪು (60) ಅವರ ಮೃತದೇಹ ಬುಧವಾರ ಪತ್ತೆಯಾಗಿದೆ. ಇದರೊಂದಿಗೆ ಪ್ರಕೃತಿ ವಿಕೋಪದಲ್ಲಿ ಸಾವಿಗೀಡಾದವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಆ.9ರಂದು ಇಲ್ಲಿ ಬೆಟ್ಟ ಕುಸಿದು ಇಬ್ಬರು ಸಾವನ್ನಪ್ಪಿ, ಎಂಟು ಮಂದಿ ನಾಪತ್ತೆಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next