Advertisement

ಕೊಡಗು ಜಿಲ್ಲಾ ಕಾಂಗ್ರೆಸ್‌: ಇಂದಿನಿಂದ ಮನೆ ಮನೆಗೆ ಗ್ಯಾರಂಟಿ ಕಾರ್ಡ್‌

01:03 AM Mar 02, 2023 | Team Udayavani |

ಮಡಿಕೇರಿ: ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಪಿಸಿಸಿ ಘೋಷಿಸಿರುವ ವಿವಿಧ ಭರವಸೆಗಳ ಕಾಂಗ್ರೆಸ್‌ ಗ್ಯಾರಂಟಿ ಕಾರ್ಡ್‌ ಅನ್ನು ಮನೆ ಮನೆಗೆ ತಲುಪಿಸುವ ಅಭಿಯಾನ ಮಾ. 2ರಿಂದ ಜಿಲ್ಲೆಯಾದ್ಯಂತ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಧರ್ಮಜ ಉತ್ತಪ್ಪ ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಉಸ್ತುವಾರಿ ರಣ್‌ದೀಪ್‌ ಸಿಂಗ್‌ ಸುಜೇìವಾಲ ಗುರುವಾರ ಮಡಿಕೇರಿಯ ಡಾ| ಬಿ.ಆರ್‌. ಅಂಬೇಡ್ಕರ್‌ ಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

ಮೊದಲ ಗ್ಯಾರಂಟಿ ಕಾರ್ಡ್‌ ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯೂನಿಟ್‌ ಉಚಿತ ಪೂರೈಕೆ, 2ನೇ ಗ್ಯಾರಂಟಿ ಪ್ರತಿ ಮನೆಯೊಡತಿಗೆ 2 ಸಾವಿರ ರೂ. ಪ್ರೋತ್ಸಾಹ ಧನ ನೀಡಲು ಗೃಹಲಕ್ಷ್ಮೀ ಯೋಜನೆ ಜಾರಿ ಮತ್ತು 3ನೇ ಗ್ಯಾರಂಟಿಯಾಗಿ ಅನ್ನಭಾಗ್ಯ ಯೋಜನೆ ಮೂಲಕ ಬಿಪಿಎಲ್‌ ಕಾರ್ಡ್‌ದಾರರಿಗೆ 10 ಕೆ.ಜಿ. ಅಕ್ಕಿ ಉಚಿತವಾಗಿ ನೀಡುವ ಭರವಸೆಯ ಕಾರ್ಡ್‌ನ್ನು ಮನೆ ಮನೆಗೆ ತಲುಪಿಸಲಾಗುವುದು. ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವ ನಾರಾಯಣ್‌, ಎಐಸಿಸಿ ಕಾರ್ಯದರ್ಶಿ, ಕೊಡಗು ಉಸ್ತುವಾರಿ ಹಾಗೂ ಕೇರಳ ಶಾಸಕ ರೋಜಿ ಜಾನ್‌ ಮತ್ತಿತರ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿದ್ದಾರೆ ಎಂದು ತಿಳಿಸಿದರು. ಕೊಡಗು ಜಿಲ್ಲೆಗೆ ಸಂಬಂಧಿಸಿ ಪ್ರತ್ಯೇಕ ಪ್ರಣಾಳಿಕೆಯನ್ನು ಸಧ್ಯದಲ್ಲಿಯೇ ಹೊರ ತರಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next