Advertisement

ದಚ್ಚು- ಕಿಚ್ಚ ದೋಸ್ತ್? ಮುನಿಸು ಮರೆಯುತ್ತಾ ಸ್ಟಾರ್ ಜೋಡಿ?

09:34 AM Dec 22, 2022 | Team Udayavani |

ಹೊಸಪೇಟೆಯಲ್ಲಿ ನಟ ದರ್ಶನ್‌ ಅವರಿಗೆ ಕಿಡಿಗೇಡಿಯೊಬ್ಬ ಚಪ್ಪಲಿ ಎಸೆದ ಘಟನೆಯನ್ನು ಖಂಡಿಸಿದ ನಟ ಕಿಚ್ಚಸುದೀಪ್‌ ಅವರಿಗೆ ದರ್ಶನ್‌ ಧನ್ಯವಾದ ತಿಳಿಸಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿರುವ ದರ್ಶನ್‌, ನಿಮ್ಮ ಪ್ರೀತಿಯ ಸಾಲುಗಳಿಗೆ ಧನ್ಯವಾದಗಳು ಎಂದಿದ್ದಾರೆ. ಈ ಟ್ವೀಟ್‌ ಸದ್ಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದ್ದು, ಇಬ್ಬರು ಸ್ಟಾರ್‌ ನಟರು ಮುನಿಸು ಮರೆತು ಒಂದಾಗುತ್ತರಾ ಎಂಬ ಕುತೂಹಲ ಸಿನಿಮಾ ಮಂದಿಯಲ್ಲಿ ಮೂಡಿದೆ.

ಒಂದಾಗಿ ಎಂದ ಜಗ್ಗೇಶ್‌: ನಟ ದರ್ಶನ್‌ ಹಾಗೂ ಸುದೀಪ್‌ ಮುನಿಸು ಮರೆತು ಒಂದಾಗಿ ಎಂದು ನಟ ಜಗ್ಗೇಶ್‌ ಟ್ವೀಟ್‌ ಮಾಡಿದ್ದಾರೆ. ಪ್ರೀತಿಯ ದರ್ಶನ್‌ ಹಳೆಯ ಚಿಂತನೆಗೆ ವಿನಾಯ್ತಿ ಹೇಳಿ ಹೊಸ ಸ್ನೇಹದ ಭಾಷ್ಯಕ್ಕೆ ಮುನ್ನುಡಿ ಬರೆದು ಸುದೀಪ್‌, ನೀನು ಒಂದಾಗಿ ಸಹಸ್ರ ಅಭಿಮಾನಿಗಳಿಗೆ ಹರ್ಷದ ಹೊನಲು ಹರಸಿ. ನೀವಿ ಬ್ಬರು ಒಂದಾದರೆ ಕೋಟಿಮನ ಒಂದಾಗಿ ಭಿನ್ನಾಭಿಪ್ರಾಯ ಎಂಬ ಕಾಡ್ಗಿಚ್ಚು ತಣ್ಣಗಾಗಿ ಸುಟ್ಟ ಜಾಗ ನಂದನವನ ಆಗುತ್ತದೆ ಎಂದು ಟ್ವೀಟ್‌ ಮಾಡಿದ್ದಾರೆ.

ದರ್ಶನ್‌ ಪತ್ರ: ಘಟನೆಗೆ ಸಂಬಂಧಿಸಿದಂತೆ ನಟ ದರ್ಶನ್‌ ಪತ್ರವೊಂದನ್ನು ಬರೆದಿದ್ದಾರೆ. ಆ ಪತ್ರ ಹೀಗಿದೆ; ಈ ಸಮಯದಲ್ಲಿ ನನಗಿಂತ ನನ್ನ ಸೆಲೆಬ್ರಿಟಿಗಳಿಗೆ ಹೆಚ್ಚು ನೋವಾಗಿದೆ. ಇಂಥ ಘಟನೆಗಳು ಒಬ್ಬ ವ್ಯಕ್ತಿಯನ್ನು ಮತ್ತಷ್ಟು ಬಲಪಡಿಸುತ್ತದೆಯೆ ಹೊರತು ಬಲಹೀನನ್ನಾಗಿ ಮಾಡುವುದಿಲ್ಲ. ಅದಕ್ಕೆ ಉದಾಹರಣೆಗಳು ನಮ್ಮ ಕನ್ನಡ ನೆಲದಲ್ಲೇ ನೋಡಿದ್ದೇವೆ. ಈ ಸಮಯದಲ್ಲಿ ನ್ಯಾಯದ ಪರ ನಿಂತ ಚಿತ್ರರಂಗದ ಪ್ರತಿಯೊಬ್ಬ ಗೆಳೆಯರು, ನಟರಿಗೆ ಧನ್ಯವಾದಗಳು.

ಇದನ್ನೂ ಓದಿ:ಎರಡನೇ ಟೆಸ್ಟ್ ಆರಂಭ: ಒಂದೇ ಪಂದ್ಯದ ಬಳಿಕ ಹೊರಬಿದ್ದ ಕಳೆದ ಪಂದ್ಯದ ಮ್ಯಾನ್ ಆಫ್ ದಿ ಮ್ಯಾಚ್ ಕುಲದೀಪ್

Advertisement

ಈ ಘಟನೆಯನ್ನು ತಪ್ಪು ಹಾದಿಯಲ್ಲಿ ಪ್ರೇರೇಪಿಸಲು ಪ್ರಯತ್ನಿಸಿದ ಕೆಲವರಿಗೂ ಧನ್ಯವಾದಗಳು. ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ, ಹಾಳು ಮಾಡೋಕೆ ನೂರು ಜನ ಇದ್ರೆ, ಕಾಯೋಕೆ ನಮ್ಮ ಕೋಟ್ಯಂತರ ಸೆಲೆಬ್ರಿಟಿಗಳಿರುತ್ತಾರೆ. ನಿಮ್ಮ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ…

Advertisement

Udayavani is now on Telegram. Click here to join our channel and stay updated with the latest news.

Next