Advertisement

Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್‌ ವೈರಲ್‌

12:39 AM Jul 02, 2024 | Team Udayavani |

ಬೆಂಗಳೂರು: ನಟ ದರ್ಶನ್‌ ಪ್ರಕರಣದ ಕುರಿತು ಮಾಜಿ ಸಂಸದೆ ಸುಮಲತಾ ಅಂಬರೀಷ್‌ ಯಾಕೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂಬ ಚರ್ಚೆ ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿರುವ ಹೊತ್ತಿನಲ್ಲೇ ಸುಮಲತಾ ಮಾಡಿರುವ ಪೋಸ್ಟ್‌ ವೈರಲ್‌ ಆಗಿದೆ.

Advertisement

ಅವರು ಭಗವದ್ಗೀತೆಯ ಶ್ಲೋಕವೊಂದನ್ನು ಪೋಸ್ಟ್‌ ಮಾಡಿದ್ದು, ಇದು ದರ್ಶನ್‌ ಕುರಿತು ಎಂಬ ಚರ್ಚೆ ನಡೆಯುತ್ತಿದೆ. “ಒಳ್ಳೆಯ ಸಮಯ ಬರುವ ಮುನ್ನ ಸಾಕಷ್ಟು ಕಷ್ಟಗಳು ಬರುತ್ತವೆ. ಆದರೆ ನಾವು ನಂಬಿಕೆ ಕಳೆದುಕೊಳ್ಳದೇ ಕಾಯಬೇಕು’ ಎಂಬರ್ಥದಲ್ಲಿ ಪೋಸ್ಟ್‌ ಮಾಡಿದ್ದಾರೆ.

ದರ್ಶನ್‌ ಸುಮಲತಾರನ್ನು ಮದರ್‌ ಇಂಡಿಯಾ ಎಂದೇ ಕರೆಯುತ್ತಿದ್ದು, ಅವರ ಕುಟುಂಬದ ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದ. ಸುಮಲತಾ ಕೂಡ ದರ್ಶನ್‌ ನನ್ನ ದೊಡ್ಡ ಮಗ ಎನ್ನುವ ಮೂಲಕ ಅಕ್ಕರೆ ತೋರುತ್ತಿದರು.

 

Advertisement

Udayavani is now on Telegram. Click here to join our channel and stay updated with the latest news.

Next