Advertisement

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

05:17 PM Sep 21, 2024 | Team Udayavani |

ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ನಟ ದರ್ಶನ್(Darshan) ಪರ ವಕೀಲರು ಕೊನೆಗೂ ಶನಿವಾರ(ಸೆ21)ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

Advertisement

ಬಂಧನವಾಗಿ ನೂರು ದಿನ ಕಳೆದ ಬಳಿಕ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಳ್ಳಾರಿ ಜೈಲಿನ ಹೈ ಸೆಕ್ಯುರಿಟಿ ಸೆಲ್‌ ನಲ್ಲಿರುವ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಪೋನ್ ಕರೆ ಮೂಲಕ ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ವಕೀಲರಿಂದ ಮಾಹಿತಿ ಪಡೆದಿರುವ ಬಗ್ಗೆ ವರದಿಯಾಗಿದೆ.

ಜಾಮೀನು ಅರ್ಜಿ ಸಲ್ಲಿಕೆಯಾಗುತ್ತಿದ್ದಂತೆ ದರ್ಶನ್ ಕುಟುಂಬ ಮತ್ತು ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ.ಸೆಲ್‌ನಲ್ಲೆ ದರ್ಶನ್ ಚಡಪಡಿಸುತ್ತಿದ್ದು, ಅತ್ತಿಂದಿತ್ತ ಓಡಾಡುತ್ತಿರುವ ಬಗ್ಗೆಯೂ ವರದಿಯಾಗಿದೆ.

ಸೋಮವಾರ ಕ್ಕೆ ಮುಂದೂಡಿಕೆ
ತುರ್ತು ವಿಚಾರಣೆ ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೋಮವಾರ (ಸೆ23)ಕ್ಕೆ ಮುಂದೂಡಿದೆ. ಪ್ರಕರಣದ ಆರೋಪಿ ನಂಬರ್ 1 ಪವಿತ್ರಾ ಗೌಡ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

Advertisement

Udayavani is now on Telegram. Click here to join our channel and stay updated with the latest news.

Next