Advertisement
ಬಂಧನವಾಗಿ ನೂರು ದಿನ ಕಳೆದ ಬಳಿಕ 57ನೇ ಸಿಸಿಎಚ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಕೆ ಮಾಡಲಾಗಿದೆ. ಬಳ್ಳಾರಿ ಜೈಲಿನ ಹೈ ಸೆಕ್ಯುರಿಟಿ ಸೆಲ್ ನಲ್ಲಿರುವ ದರ್ಶನ್ ಪ್ರಿಸನ್ ಕಾಲ್ ಸಿಸ್ಟಮ್ ಅಡಿ ಪೋನ್ ಕರೆ ಮೂಲಕ ಜಾಮೀನು ಅರ್ಜಿ ಸಲ್ಲಿಕೆ ಬಗ್ಗೆ ವಕೀಲರಿಂದ ಮಾಹಿತಿ ಪಡೆದಿರುವ ಬಗ್ಗೆ ವರದಿಯಾಗಿದೆ.
ತುರ್ತು ವಿಚಾರಣೆ ಕೋರಿ ದರ್ಶನ್ ಪರ ವಕೀಲರು ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೋರ್ಟ್ ಸೋಮವಾರ (ಸೆ23)ಕ್ಕೆ ಮುಂದೂಡಿದೆ. ಪ್ರಕರಣದ ಆರೋಪಿ ನಂಬರ್ 1 ಪವಿತ್ರಾ ಗೌಡ ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು ಅದರ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.