Advertisement

ಇಂದಿನಿಂದ ‘ಕ್ರಾಂತಿ’ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

09:26 AM Oct 25, 2021 | Team Udayavani |

ದರ್ಶನ್‌ ನಟನೆಯ 55ನೇ ಚಿತ್ರ “ಕ್ರಾಂತಿ’ಗೆ ಮುಹೂರ್ತ ಇತ್ತೀಚೆಗೆ ನಡೆದಿರೋದು ನಿಮಗೆ ಗೊತ್ತೇ ಇದೆ. ಈಗ ಚಿತ್ರೀಕರಣದ ಸಮಯ.

Advertisement

ಹೌದು, ದರ್ಶನ್‌ ಅವರ “ಕ್ರಾಂತಿ’ ಚಿತ್ರದ ಚಿತ್ರೀಕರಣ ಇಂದಿನಿಂದ ಆರಂಭವಾಗುತ್ತಿದೆ. ಮೊದಲ ಹಂತವಾಗಿ ಬೆಂಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ. ಈ ಮೂಲಕ ದರ್ಶನ್‌ ತುಂಬಾ ದಿನಗಳ ನಂತರ ಮತ್ತೆ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತಿದ್ದಾರೆ. ದರ್ಶನ್‌ ಕೂಡಾ ಈ ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಚಿತ್ರದ ಮುಹೂರ್ತದ ದಿನ ತಾವು ಸಿದ್ಧವಾಗುತ್ತಿದ್ದ ವಿಡಿಯೋವನ್ನು ಚಿತ್ರೀಕರಿಸಿ ಅಭಿಮಾನಿಗಳ ಮುಂದಿಟ್ಟಿದ್ದರು. ಈ ವಿಡಿಯೋ ದೊಡ್ಡ ಮಟ್ಟದಲ್ಲಿ ವೈರಲ್‌ ಆಗಿತ್ತು.

ಇದನ್ನೂ ಓದಿ:ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಇನ್ನು, “ಕ್ರಾಂತಿ’ಗೆ ನಾಯಕಿಯಾಗಿ ರಚಿತಾ ರಾಮ್‌ ಆಯ್ಕೆಯಾಗಿದ್ದು, ಕ್ರೇಜಿಸ್ಟಾರ್‌ ರವಿಚಂದ್ರನ್‌, ದರ್ಶನ್‌ ತಂದೆ ಪಾತ್ರದಲ್ಲಿ ನಟಿಸಲಿದ್ದಾರೆ. ಇನ್ನು, ಈ ಚಿತ್ರವನ್ನು ವಿ.ಹರಿಕೃಷ್ಣ ನಿರ್ದೇಶಿಸುತ್ತಿದ್ದಾರೆ. ಈ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗುತ್ತಿದ್ದಾರೆ. ಕಳೆದ ಬಾರಿ “ಯಜಮಾನ’ ಚಿತ್ರದ ನಿರ್ದೇಶನದಲ್ಲೂ ಹರಿಕೃಷ್ಣ ಅವರು ತೊಡಗಿಕೊಂಡಿದ್ದರು. ಜೊತೆಗೆ ಪಿ.ಕುಮಾರ್‌ ಕೂಡಾ ನಿರ್ದೇಶಕರಾಗಿದ್ದರು. ಈ ಬಾರಿ ವಿ.ಹರಿಕೃಷ್ಣ ಅವರು ದರ್ಶನ್‌ ಅವರ 55ನೇ ಚಿತ್ರವನ್ನು ನಿರ್ದೇಶಿಸಲು ಅಣಿಯಾಗಿದ್ದಾರೆ.

ಈ ಚಿತ್ರವನ್ನು “ಮೀಡಿಯಾ ಹೌಸ್‌ ಸ್ಟುಡಿಯೋ’ದಡಿ ಶೈಲಜಾ ನಾಗ್‌ ಹಾಗೂ ಬಿ.ಸುರೇಶ್‌ ನಿರ್ಮಿಸುತ್ತಿದ್ದಾರೆ. ಈಗಾಗಲೇ ಇವರು ದರ್ಶನ್‌ ಅವರ “ಯಜಮಾನ’ ಚಿತ್ರವನ್ನು ನಿರ್ಮಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next