Advertisement

20 ವರ್ಷಗಳ ನಂತರ ಕೋಡಿ ಬಿದ್ದ ದಾಸಾಲಕುಂಟೆ ಕೆರೆ

05:04 PM Aug 07, 2022 | Team Udayavani |

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿದೆ.

Advertisement

80 ಎಕರೆಗೂ ಅಧಿಕ ವಿಸ್ತೀರ್ಣ ಹೊಂದಿದ ಕೆರೆ ಇದಾಗಿದ್ದು, 2015 ರಲ್ಲಿ ಅರ್ಧ ಭಾಗದಷ್ಟು ಮಾತ್ರ ತುಂಬಿತ್ತು ಆ ಸಂದರ್ಭದಲ್ಲಿ ಸಿದ್ದರಬೆಟ್ಟದ ಶ್ರೀ ಬಾಳೆಹೊನ್ನೂರು ಮಠದ ಶ್ರೀಗಳಾದ ವೀರಭದ್ರ ಶಿವಾಚಾರ್ಯ ಸ್ವಾಮೀಜಿರವರು ಬಾಗಿನ ಅರ್ಪಿಸಿದ್ದರು.ದಾಸಾಲಕುಂಟೆ ಕೆರೆ ಸುಮಾರು 16 ಹಳ್ಳಿಗಳ ಜೀವನಾಡಿಯಾಗಿದೆ . ಕೆರೆ ಕೋಡಿ ಬಿದ್ದಿರುವುದನ್ನು ವೀಕ್ಷಿಸಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ.

ಕೆರೆ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದನ್ನು ಕಂಡು ಪ್ರವಾಸಿಗರು ಮತ್ತು ಊರಿನ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next