Advertisement

28ಕ್ಕೆ ಮೈಸೂರಲ್ಲಿ ದಸರಾ ಉನ್ನತ ಮಟ್ಟದ ಸಭೆ

06:00 AM Aug 26, 2018 | Team Udayavani |

ಮೈಸೂರು: ಕೊಡಗಿನಲ್ಲಿ ಉಂಟಾದ ನೆರೆ ಪರಿಸ್ಥಿತಿಯಿಂದಾಗಿ ಮುಂದೂಡಲ್ಪಟ್ಟಿದ್ದ ಮುಖ್ಯಮಂತ್ರಿ ಅಧ್ಯಕ್ಷತೆಯ ದಸರಾ ಉನ್ನತ ಮಟ್ಟದ ಸಭೆ ಆ.28ರಂದು ಮೈಸೂರಿನಲ್ಲಿ ನಡೆಯಲಿದೆ. 

Advertisement

ಅಂದು ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಮೈಸೂರಿಗೆ ಆಗಮಿಸಲಿರುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಚಿವರು, ಶಾಸಕರು, ಸಂಸದರು ಸೇರಿ 50 ರಿಂದ 60 ಚುನಾಯಿತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದು, ಈ ಬಾರಿಯ ದಸರಾ ಮಹೋತ್ಸವದ ಬಜೆಟ್‌, ಉದ್ಘಾಟಕರು ಯಾರು? ಎಂಬುದು ಸೇರಿ ದಸರಾ ಮಹೋತ್ಸವದ ರೂಪುರೇಷೆ ಸಿದಟಛಿಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next