Advertisement

ಇಂದು ಗಜಪಡೆಯ ಅರಮನೆ ಪ್ರವೇಶ 

06:00 AM Sep 05, 2018 | Team Udayavani |

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆ, ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿರುವ ಗಜಪಡೆಯ ಮೊದಲ ತಂಡ ಬುಧವಾರ ಅರಮನೆ ಪ್ರವೇಶಿಸಲಿದೆ. ಈಗಾಗಲೇ ಹುಣಸೂರಿನ ವೀರನಹೊಸಳ್ಳಿಯಿಂದ ಮೈಸೂರಿಗೆ ಬಂದಿರುವ ಗಜಪಡೆ, ಅಶೋಕಪುರಂನ ಅರಣ್ಯ ಭವನದಲ್ಲಿ ತಂಗಿದೆ. ಬುಧವಾರ ಸಂಜೆ 4.30ಕ್ಕೆ ಅರಮನೆಯ ಜಯ ಮಾರ್ತಾಂಡ ದ್ವಾರದ ಮೂಲಕ ಅರ್ಜುನ ನೇತೃತ್ವದ ಗಜಪಡೆ ಅರಮನೆ ಪ್ರವೇಶಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್‌ ಸೇರಿ ಇತರರು ಆನೆಗಳಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಿದ್ದಾರೆ. ಇದರೊಂದಿಗೆ ನಗರದಲ್ಲಿ ದಸರಾ ಹಬ್ಬದ ಸಂಭ್ರಮಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next