Advertisement

ಕುಟುಂಬದ ಜಾತ್ರೆಯಂತೆ ಇತ್ತು ನಾಡ ಹಬ್ಬ ದಸರಾ

06:00 AM Oct 21, 2018 | |

ಮೈಸೂರು: ಈ ಬಾರಿಯ ದಸರಾ ಅಪ್ಪ, ಮಕ್ಕಳು,ಹೆಂಡತಿ,ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಂತಿತ್ತು ಎಂದು ಕಾಂಗ್ರೆಸ್‌
ಶಾಸಕ ತನ್ವೀರ್‌ ಸೇಠ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರ ವಿರುದ್ಧ
ಹರಿಹಾಯ್ದರು. ದಸರಾ ನಾಡಹಬ್ಬವಾಗಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗದುಕೊಂಡು ಆಚರಿಸಬೇಕಿತ್ತು. ಹೀಗಿದ್ದರೂ, ಜಿಲ್ಲಾ ಉಸ್ತುವಾರಿ ಸಚಿವರು ದಸರಾ ತಮ್ಮ ಸ್ವತ್ತು, ತಮ್ಮ ಮನೆಯ ಕಾರ್ಯಕ್ರಮ ಎಂಬ ರೀತಿಯಲ್ಲಿ ವರ್ತಿಸಿದರು. ಹೀಗಾಗಿ, ಇದು ನಾಡಹಬ್ಬವಾಗುವ ಬದಲು ಅಪ್ಪ,ಮಕ್ಕಳು, ಹೆಂಡತಿ, ಮೊಮ್ಮಕ್ಕಳು ಪಾಲ್ಗೊಳ್ಳುವ ಜಾತ್ರೆಯಾಯಿತು. ರಾಜ್ಯದಲ್ಲಿ ಅಧಿಕಾರ ನಡೆಸುವಲ್ಲಿ ನಾವು ಒಂದಾಗಿದ್ದರೂ ಅದಕ್ಕೆ ಧಕ್ಕೆ ಬಾರದಂತೆ ಅವ್ಯವಸ್ಥೆಗಳ ವಿರುದ್ಧ ಹೋರಾಟ ನಡೆಸುತ್ತೇವೆ ಎಂದು ಕಿಡಿ ಕಾರಿದರು. 

ಜಿಲ್ಲಾಡಳಿತ ಕೂಡಾ ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಂತೆ ವರ್ತಿಸಿತು. ದಸರಾ ವೇಳೆ ಉಂಟಾದ ಶಿಷ್ಠಾಚಾರ ಉಲ್ಲಂಘನೆ, ಪಾಸ್‌ಗಳ ದುರ್ಬಳಕೆ ಮತ್ತು ಪೊಲೀಸರ ಕರ್ತವ್ಯ ಲೋಪಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. ಜಿಲ್ಲಾ ಉಸ್ತುವಾರಿ ಸಚಿವರ ವರ್ತನೆ ಖಂಡಿಸಿ ಸ್ಥಳೀಯ ಕಾಂಗ್ರೆಸ್‌ ಪ್ರತಿನಿಧಿಗಳು ಈ ಬಾರಿ ದಸರಾದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next