Advertisement

ಶ್ರೀರಾಮ ಸೇನೆಯಿಂದ ದತ್ತಮಾಲಾ ಅಭಿಯಾನ: ಬಿಗಿ ಭದ್ರತೆ

12:31 PM Nov 14, 2021 | Team Udayavani |

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು.

Advertisement

ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು.

ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ದರ್ಶನಕ್ಕೆ ಆಗಮಿಸಿದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಪೊಲೀಸರು ಒಳಗೆ ಬಿಡುತ್ತಿದ್ದಾರೆ.

ನಗರದಲ್ಲಿ ಪ್ರತಿಭಟನೆ

ದತ್ತಮಾಲಾಧಾರಿಗಳ ಬಸ್ ಮೇಲೆ ಕೋಲಾರದಲ್ಲಿ ಕಲ್ಲು ತೂರಾಟ ನಡೆಸಿದ ಹಿನ್ನೆಲೆ, ಹಲ್ಲೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಶ್ರೀರಾಮಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ಇದನ್ನೂ ಓದಿ:ದತ್ತಮಾಲಾಧಾರಿಗಳ ಮೇಲೆ ಕಲ್ಲು ತೂರಾಟ: ಮುತಾಲಿಕ್ ಕಿಡಿ

ಚಿಕ್ಕಮಗಳೂರು ನಗರದ ಶಾರದ ಮಠದಲ್ಲಿ ಮುಂಭಾಗ ಪ್ರತಿಭಟನೆ ನಡೆಸಿ, ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಎಸ್ಪಿ ಅಕ್ಷಯ್ ಅವರಿಗೆ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಪ್ರಮೋದ್ ಮುತಾಲಿಕ್ ಭಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next