Advertisement

ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ; ದತ್ತಪೀಠದ ರಸ್ತೆ ಉದ್ದಕ್ಕೂ ಮೊಳೆಗಳು

12:35 PM Dec 06, 2022 | Team Udayavani |

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ದತ್ತ ಜಯಂತಿ ಉತ್ಸವಕ್ಕೆ ಅಡ್ಡಿಪಡಿಸುವ ಹುನ್ನಾರ ನಡೆದಿದ್ದು, ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿತ್ತು ಎಂದು ತಿಳಿದು ಬಂದಿದೆ.

Advertisement

ವಾಹನಗಳು ಅಪಘಾತವಾಗುವ ರೀತಿಯಲ್ಲಿ ಸಂಚು ರೂಪಿಸಿರುವ ಕಿಡಿಗೇಡಿಗಳು ದರ್ಶನಕ್ಕೆ ಅಡ್ಡಿಪಡಿಸುವ ಹಿನ್ನೆಲೆ ದತ್ತಪೀಠಕ್ಕೆ ತೆರಳುವ ರಸ್ತೆ ಉದ್ದಕ್ಕೂ ಮೊಳೆಗಳನ್ನು ಹಾಕಿ ಅಪಘಾತ ಸೃಷ್ಠಿಸುವ ಹುನ್ನಾರ ನಡೆದಿತ್ತು ಎನ್ನಲಾಗಿದೆ.

ಕೈಮರ ಚೆಕ್ ಪೋಸ್ಟ್ ನಿಂದ ದತ್ತಪೀಠದ ರಸ್ತೆಯ ಉದ್ದಕ್ಕೂ ಮೊಳೆಗಳನ್ನು ಹಾಕಲಾಗಿದ್ದು, ಕಿಡಿಕೇಡಿಗಳ ಕೃತ್ಯಕ್ಕೆ ಶಾಸಕ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇಂದಿನಿಂದ ದತ್ತ ಜಯಂತಿ ಉತ್ಸವಕ್ಕೆ ಚಾಲನೆ ನೀಡಲಾಯಿತು. ಮೊದಲ ದಿನವಾದ ಇಂದು ಅನುಸೂಯ ಜಯಂತಿ ನಡೆಯಲಿದ್ದು, ಮಹಿಳೆಯರು ದತ್ತಪೀಠಕ್ಕೆ ತೆರಳಿ ಅನುಸೂಯ ದೇವಿಯ ದರ್ಶನ ಪಡೆಯಲಿರುವರು.

Advertisement
Advertisement

Udayavani is now on Telegram. Click here to join our channel and stay updated with the latest news.

Next