Advertisement

Nagenahalli ದರ್ಗಾದಲ್ಲಿ ದತ್ತಜಯಂತಿ; ಶ್ರೀರಾಮಸೇನೆಯ ರಂಜಿತ್ ಶೆಟ್ಟಿ ಪೊಲೀಸ್ ವಶಕ್ಕೆ

10:19 AM Dec 26, 2023 | Team Udayavani |

ಚಿಕ್ಕಮಗಳೂರು: ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ನಡೆಸುವುದಾಗಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

ದತ್ತಪೀಠವೇ ಬೇರೆ, ದರ್ಗಾವೇ ಬೇರೆ, ಮುಸ್ಲಿಂ ಸಮುದಾಯದವರು ದತ್ತಪೀಠದಲ್ಲಿ ಉರುಸ್ ಆಚರಿಸುವುದಾದರೇ, ಸೌಹಾರ್ದತೆಯ ದೃಷ್ಟಿಯಿಂದ ನಾಗೇನಹಳ್ಳಿಯಲ್ಲಿ ಡಿ.26 ರಂದು ದತ್ತಜಯಂತಿ ಆಚರಿಸುವುದಾಗಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮತ್ತು ರಂಜಿತ್ ಶೆಟ್ಟಿ ಹೇಳಿಕೆ ನೀಡಿದ್ದರು.

ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಮತ್ತು ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಅವರನ್ನು ಜ.5ರ ವರೆಗೆ ಜಿಲ್ಲಾ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಇದನ್ನೂ ಓದಿ:Mutton Shanks; ಮೆನುವಿನಲ್ಲಿ ಮಟನ್ ಮೂಳೆ ಇಲ್ಲವೆಂದು ಮದುವೆ ರದ್ದು ಮಾಡಿದ ವರನ ಕಡೆಯವರು!

ನಾಗೇನಹಳ್ಳಿ ದರ್ಗಾ ಸುತ್ತಮುತ್ತ 200 ಮೀಟರ್ ಪ್ರದೇಶದಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗಿದೆ.

Advertisement

ಜಿಲ್ಲಾಡಳಿತ ನಿಷೇಧದ ನಡುವೆ ನಾಗೇನಹಳ್ಳಿ ದರ್ಗಾದಲ್ಲಿ ದತ್ತಜಯಂತಿ ಆಚರಣೆಗೆ ಮುಂದಾಗಬಹುದಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶ್ರೀರಾಮಸೇನೆಯ ರಂಜಿತ್ ಶೆಟ್ಟಿಯನ್ನು ಬಂಧಿಸಿರುವ ಪೊಲೀಸರು ಗೌಪ್ಯಸ್ಥಳಕ್ಕೆ ಕರೆದೊಯ್ದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next