Advertisement

ಚಿಕ್ಕಮಗಳೂರು: ದತ್ತಮಾಲಾ ಅಭಿಯಾನಕ್ಕೆ ಚಾಲನೆ

11:24 AM Nov 22, 2020 | keerthan |

ಚಿಕ್ಕಮಗಳೂರು: ಶ್ರೀರಾಮ ಸೇನೆ ವತಿಯಿಂದ ಪ್ರತಿ ವರ್ಷ ಆಯೋಜಿಸುವ ದತ್ತಮಾಲಾ ಅಭಿಯಾನಕ್ಕೆ ಭಾನುವಾರ ನಗರದಲ್ಲಿ ಚಾಲನೆ ನೀಡಲಾಯಿತು. ಭಾನುವಾರ ಬೆಳಿಗ್ಗೆ ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಶಂಕರ ಮಠದಲ್ಲಿ ಸುಮಾರು 20ಕ್ಕೂ ಹೆಚ್ಚು ದತ್ತ ಭಕ್ತರು ದತ್ತಮಾಲೆ ಧರಿಸಿದರು.

Advertisement

ಇಂದಿನಿಂದ ಐದು ದಿನಗಳ ದತ್ತಭಕ್ತರು ವಿಶೇಷ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿ ಐದನೇ ದಿನ ದತ್ತಪೀಠಕ್ಕೆ ತೆರಳಿ ದತ್ತಪಾದುಕೆ ದರ್ಶನ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ:ಕಳೆಂಜ ನಂದಗೋಕುಲ ಗೋಶಾಲೆ ಉದ್ಘಾಟಿಸಿದ ನಳಿನ್ ಕುಮಾರ್ ಕಟೀಲ್

ಕೊರೊನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ದತ್ತಮಾಲಾ ಆಚರಿಸಲಾಗುತ್ತಿದ್ದು ದತ್ತಮಾಲೆ ಧಾರಣೆ ಇಂದಿನಿಂದ ಆರಂಭಗೊಂಡಿದ್ದು, ದತ್ತಪೀಠವನ್ನು ಹಿಂದೂಗಳಿಗೆ ಒಪ್ಪಿಸಬೇಕೆಂದು ಇದೆ ಸಂದರ್ಭದಲ್ಲಿ ದತ್ತಭಕ್ತರು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next