Advertisement

ಬೆಣ್ಣೆ ನಗರಿಯಲ್ಲಿ ಪೊಗರು ಖದರ್‌

03:26 PM Feb 15, 2021 | |

ದಾವಣಗೆರೆ: ಬೆಣ್ಣೆ ನಗರಿ ಖ್ಯಾತಿಯ ದಾವಣಗೆರೆಯ ಸರ್ಕಾರಿ ಹೈಸ್ಕೂಲ್‌ ಮೈದಾನದಲ್ಲಿ ಭಾನುವಾರ ಸಂಜೆ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ನಂದಕಿಶೋರ್‌ ನಿರ್ದೇಶನ ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ, ರಶ್ಮಿಕಾ ಮಂದಣ್ಣ ನಟನೆಯ ಬಹುಭಾಷಾ ಚಿತ್ರ “ಪೊಗರು’ ಚಿತ್ರದ ಧ್ವನಿಸುರುಳಿ ಬಿಡುಗಡೆಗೊಂಡಿತು. ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಂಸದ ಜಿ.ಎಂ. ಸಿದ್ದೇಶ್ವರ, ನಟ ಧ್ರುವ ಸರ್ಜಾ, ಬಹುಭಾಷಾ ನಟ ಅರ್ಜುನ್‌ ಸರ್ಜಾ, ಹಿರಿಯ ನಟ ರಾಘವೇಂದ್ರ ರಾಜಕುಮಾರ್‌ ಇತರರು ಇದ್ದರು. ಚಿತ್ರದ ಸಂಗೀತ ನಿರ್ದೇಶಕ
ಚಂದನ್‌ ಶೆಟ್ಟಿ ಖರಾಬು…ಹಾಡು ಹಾಡುವ ಮೂಲಕ ರಂಜಿಸಿದರು. ಧ್ರುವ ಸರ್ಜಾ ಚಿತ್ರದ ಡೈಲಾಗ್‌ ಮೂಲಕ ಪ್ರೇಕ್ಷಕರ ರಂಜಿಸಿದರು. ಅನುಶ್ರೀ ನಿರೂಪಿಸಿದರು. ಆಡಿಯೋ ಕಾರ್ಯಕ್ರಮ ಕಣ್ತುಂಬಿಸಿಕೊಳ್ಳಲು ಕಿಕ್ಕಿರಿದ ಸಂಖ್ಯೆಯಲ್ಲಿ ಜನರು ನೆರೆದಿದ್ದರು.

Advertisement

ಓದಿ : ಚೆನ್ನೈನಲ್ಲಿ ಇಂಗ್ಲೆಂಡ್ ಸ್ಪಿನ್ ವ್ಯೂಹ ಬೇಧಿಸಿದ ಅಶ್ವಿನ್ ಮನಮೋಹಕ ಶತಕ, ಭಾರತ ಬೃಹತ್ ಮೊತ್ತ

Advertisement

Udayavani is now on Telegram. Click here to join our channel and stay updated with the latest news.

Next