Advertisement

ಚನ್ನಗಿರಿ ಮಾದರಿ ಕ್ಷೇತ್ರವಾಗಿಸುವೆ

04:20 PM Feb 25, 2021 | Team Udayavani |

ಚನ್ನಗಿರಿ: ಅಭಿವೃದ್ಧಿ ವಿಚಾರದಲ್ಲಿ ಸದಾ ಮುನ್ನಡೆಯುವ ವ್ಯಕ್ತಿತ್ವ ಜನಪ್ರತಿನಿಧಿಗಳಿಗಿದ್ದರೆ ಅಂತಹ ಕ್ಷೇತ್ರ ಮಾದರಿ ಕ್ಷೇತ್ರವಾಗುವುದರದಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕೆಎಸ್‌ಡಿಎಲ್‌ ಅಧ್ಯಕ್ಷ, ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಹೇಳಿದರು.

Advertisement

ತಾಲೂಕಿನ ಮಾದಪುರ ಗ್ರಾಮದಲ್ಲಿ ಕೆಎಸ್‌ ಡಿಎಲ್‌ದಿಂದ ಮಂಜೂರಾದ 11 ಲಕ್ಷ ರೂ. ಅನುದಾನದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶಾಲಾ ಕೊಠಡಿ ಹಾಗೂ 15 ಲಕ್ಷ ರೂ. ವೆಚ್ಚದ ಕಾಂಕ್ರೀಟ್‌ ರಸ್ತೆಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಚನ್ನಗಿರಿ ಕ್ಷೇತ್ರದ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರು, ರಸ್ತೆ, ಚರಂಡಿ, ಸೇರಿದಂತೆ ಯಾವುದೇ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೇ ಚನ್ನಗಿರಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡಲು ಪಣ ತೊಟ್ಟಿದ್ದು, ಇದಕ್ಕೆ ಕ್ಷೇತ್ರದ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.

ಸಾಸ್ವೇಹಳ್ಳಿ ಏತ ನೀರಾವರಿ ಕಾಮಗಾರಿ ಪ್ರಗತಿಯಲ್ಲಿದ್ದು, ಈ ಯೋಜನೆಯಿಂದ ಸಾವಿರಾರು ರೈತರ ಜೀವನ ಹಸನಾಗಲಿದೆ. ಸರ್ಕಾರದಿಂದ
ಸಿಗುವಂತಹ ಸೌಲಭ್ಯಗಳನ್ನು ಯಾರೊಬ್ಬರು ಯೋಜನೆಗಳಿಗೆ ಸಹಕಾರ ನೀಡಬೇಕು. ಸರ್ಕಾರದಿಂದ ಮಾತ್ರ ಅಭಿವೃದ್ಧಿ ಅಸಾಧ್ಯ. ಅದಕ್ಕೆ ಜನತೆ ಕೂಡ ಕೈಜೋಡಿಸಿದರೆ ಬದಲಾವಣೆ ಕಾಣಬಹುದು. ಒಂದೊಮ್ಮೆ ಅ ಧಿಕಾರಿಗಳು ಮಾತು ಕೇಳದಿದ್ದರೆ ನೇರವಾಗಿ ನನ್ನ ಗಮನಕ್ಕೆ ತರಬಹುದು. ಯಾವುದೇ ಕಾರಣಕ್ಕೂ ಹಿಂಜರಿಕೆ ಮನೋಭಾವ ಇಟ್ಟುಕೊಳ್ಳಬಾರದು ಎಂದು ತಿಳಿಸಿದರು.

ಗ್ರಾಪಂ ಅಧ್ಯಕ್ಷೆ ಅನ್ನಪೂರ್ಣಮ್ಮ, ಕೆಂಚಪ್ಪ, ದೇವೇಂದ್ರಪ್ಪ, ಬಿಇಒ ಮಂಜುನಾಥ್‌ ಮತ್ತಿತರರು ಇದ್ದರು.

ಓದಿ : ಇಂಗ್ಲೆಂಡ್ ಸ್ಪಿನ್ ಜಾಲಕ್ಕೆ ಸಿಲುಕಿದ ಟೀಂ ಇಂಡಿಯಾ: 145ಕ್ಕೆ ಆಲೌಟ್, ಅಲ್ಪ ಮುನ್ನಡೆ

Advertisement
Advertisement

Udayavani is now on Telegram. Click here to join our channel and stay updated with the latest news.

Next