Advertisement

ಸಿಡಿ ಪ್ರಕರಣದಿಂದ ಬಿಜೆಪಿಗಿಲ್ಲ ಹಾನಿ

06:39 PM Apr 01, 2021 | Team Udayavani |

ದಾವಣಗೆರೆ: ಸಿಡಿ ಪ್ರಕರಣದಿಂದ ಪಕ್ಷಕ್ಕೆ ಯಾವುದೇ ರೀತಿ ಹಾನಿ ಆಗಲ್ಲ. ಏಕೆಂದರೆ ಮತದಾರರು ಸೂಕ್ಷ್ಮವಾಗಿ ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ದ್ವೇಷದ ರಾಜಕಾರಣ ಹೆಚ್ಚಾಗುತ್ತಿದೆ. ವೈಯಕ್ತಿಕ ವಿಚಾರಗಳಲ್ಲೂ ಕೈ ಹಾಕಲಾಗುತ್ತಿದೆ. ಇದಕ್ಕೆ ಜನರೇ ಸೂಕ್ತ ಉತ್ತರ ನೀಡಲಿದ್ದಾರೆ. ಅನಗತ್ಯವಾಗಿತೇಜೋವಧೆ ಆಗಬಾರದೆಂಬ ಕಾರಣಕ್ಕೆ ಕೆಲವರು ಕಾನೂನು ಮೊರೆ ಹೋಗಿದ್ದಾರೆ. ಇದಕ್ಕೆ ಕಾನೂನಿನಲ್ಲಿ ಅವಕಾಶವೂ ಇದೆ ಎಂದು ಸಮರ್ಥಿಸಿಕೊಂಡರು.

Advertisement

ರಾಜ್ಯದ ಆರ್ಥಿಕ ವ್ಯವಸ್ಥೆ ದಿವಾಳಿಯಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕೊರೊನಾ ಸಂಕಷ್ಟದಲ್ಲೂ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪನವರು ಉತ್ತಮ ಬಜೆಟ್‌ ನೀಡಿದ್ದಾರೆಂದು ಆರ್ಥಿಕ ತಜ್ಞರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು

. ಉಪ ಚುನಾವಣೆಯಲ್ಲಿ ಬಿಜೆಪಿಗೆ ಶೇ.60 ಬೆಂಬಲ ದೊರೆತಿದೆ. ಈಗಲೂ ಗೆಲುವಿನ ನಾಗಾಲೋಟ ಮುಂದುವರಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next