Advertisement
ತಾಲೂಕಿನ ತೊರಣಗಟ್ಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷೆ ಚೌಡಮ್ಮ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮಮಟ್ಟದ ಟಾಸ್ಕ್ಫೋರ್ಸ್ ಕಮಿಟಿ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್ ಮೊದಲ ಅಲೆಗಿಂತ ಎರಡನೇ ಅಲೆಯಲ್ಲಿ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಶವ ಸಂಸ್ಕಾರ ಮಾಡಲು ಸಹ ಸ್ಥಳ ದೊರೆಯದಂತ ಸ್ಥಿತಿ ನಿರ್ಮಾಣವಾಗಿದೆ.
Related Articles
Advertisement
ಗ್ರಾಪಂ ವ್ಯಾಪ್ತಿಯಲ್ಲಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಲ್ಲೇದೆವರಪುರ ಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತಾ ಧಿಕಾರಿ ಡಾ.ಉಮೇಶ್ ಮಾತನಾಡಿ, ಎರಡನೇ ಅಲೆ ಸ್ಫೋಟಗೊಳ್ಳುತ್ತಿದ್ದು, ಸಾವಿನ ಸಂಖ್ಯೆಯಲ್ಲಿ ಹೆಚ್ಚಾಳವಾಗುತ್ತಿದೆ. ಹಾಗಾಗಿ ಸೋಂಕಿತರ ಪ್ರೈಮರಿ ಮತ್ತು ಸೆಕೆಂಡರಿ ಕಾಂಟ್ಯಾಕ್ಟ್ಗಳನ್ನು ಪಟ್ಟಿ ಮಾಡಿ ಅವರನ್ನು ಕೋವಿಡ್ ಪರಿಕ್ಷೇಗೆ ಒಳಪಡಿಸಬೇಕಾಗಿದೆ. ಶೇ.70 ರಷ್ಟು ಸೋಂಕಿನ ಲಕ್ಷಣಗಳಿಲ್ಲದಿದ್ದರು ಸಹ ಸೋಂಕು ತಗಲಿರುತ್ತದೆ. ಹಾಗಾಗಿ ಪ್ರತಿಯೊಬ್ಬರು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಹೇಳಿದರು.
ಎ.ಡಿ.ಶಿವಕುಮಾರ್, ಗ್ರಾಪಂ ಅಧ್ಯಕ್ಷೆ ಚೌಡಮ್ಮ, ಕಾರ್ಯದರ್ಶಿ ಸತೀಶ್, ಗ್ರಂಥಪಾಲಕ ಬಾಲಕೃಷ್ಣ, ಸ್ವಯಂ ಸೇವಕ ಬಡಪ್ಪ, ಗ್ರಾಪಂ ಸದಸ್ಯರು ಇತರರು ಇದ್ದರು.