Advertisement

ಕೋವಿಡ್‌ ನಿಯಂತ್ರಣಕ್ಕೆಕ್ರಮ ಕೈಗೊಳ್ಳಿ

09:18 PM Jun 02, 2021 | Team Udayavani |

ದಾವಣಗೆರೆ: ತಾಲೂಕಿನ ಕಾರಿಗನೂರು ಕ್ರಾಸ್‌(ಆಂಜನೇಯ ನಗರ)ನಲ್ಲಿ ಕೋವಿಡ್‌-19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಮಂಗಳವಾರ ಸುವರ್ಣ ಕರ್ನಾಟಕ ವೇದಿಕೆಯಿಂದ ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಕುಕ್ಕುವಾಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಾರಿಗನೂರು ಕ್ರಾಸ್‌(ಆಂಜನೇಯ ನಗರ)ನಲ್ಲಿ ಕಳೆದ ವಾರದಿಂದ 6 ಕೊರೊನಾ ಪಾಸಿಟಿವ್‌ ಕೇಸ್‌ ವರದಿಯಾಗಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ಆದರೂ ಗ್ರಾಮ ಪಂಚಾಯತಿ ಸ್ಯಾನಿಟೈಸೇಷನ್‌ ಸೇರಿದಂತೆ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ. ಪಂಚಾಯಿತಿ ಅಭಿವೃದ್ಧಿ ಅಧಿ  ಕಾರಿಗಳ ಗಮನಕ್ಕೆ ತಂದರೂ ಹಾರಿಕೆ ಉತ್ತರ ನೀಡುತ್ತಿದ್ದಾರೆ ಎಂದು ವೇದಿಕೆ ರಾಜ್ಯಾಧ್ಯಕ್ಷ ಆರ್‌. ಸಂತೋಷ್‌ಕುಮಾರ್‌ ಆರೋಪಿಸಿದರು.

ಸರ್ಕಾರದ ಹೊಸ ನಿಯಮಾವಳಿಯಂತೆ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ ಗೆ ದಾಖಲಿಸಬೇಕು. ಆದರೂ, ಸೋಂಕಿತರನ್ನು ಕೇರ್‌ ಸೆಂಟರ್‌ಗೆ ದಾಖಲಿಸುವ ಕೆಲಸವಾಗಿಲ್ಲ. ಸೋಂಕಿತರ ಕುಟುಂಬದವರು ಯಾರೂ ಹೊರಗೆ ಬರದಂತೆ ಹೇಳುತ್ತಿರುವುದರಿಂದ ದೈನಂದಿನ ಅವಶ್ಯಕತೆಗಳಿಗಾಗಿ ಸೋಂಕಿತರ ಕುಟುಂಬದವರು ಪರದಾಡುವಂತಾಗಿದೆ. ಸ್ಥಳೀಯರು ಭಯದಲ್ಲೇ ಬದುಕುವಂತಾಗಿದೆ. ಕೋವಿಡ್‌ -19 ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next