Advertisement

ಉಡುಪಿ ಆಯ್ತು ಇಂದು ದಾವಣಗೆರೆಯಲ್ಲಿ ಎಸಿ,ತಹಶೀಲ್ದಾರ್‌ ಹತ್ಯೆ ಯತ್ನ!

04:43 PM Apr 08, 2017 | |

 ದಾವಣಗೆರೆ : ತಾಲೂಕಿನ ಹಳೇಬಾತಿ ಗ್ರಾಮದಲ್ಲಿ ಅಕ್ರಮವಾಗಿ ಅನ್ನಭಾಗ್ಯ ಪಡಿತರ ಅಕ್ಕಿಯನ್ನು ಸಂಗ್ರಹಿಸಿಟ್ಟ ಗೋದಾಮಿನ ಮೇಲೆ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್‌ ದಾಳಿ ನಡೆಸಿದ್ದು, ಈ ವೇಳೆ ಇಬ್ಬರ ಮೇಲೆ ಲಾರಿ ಹತ್ತಿಸಲೆತ್ನಿಸಿ ದಂಧೆಕೋರರು ಅಟ್ಟಹಾಸಗೈದ ಘಟನೆ ಶನಿವಾರ ನಡೆದಿದೆ.

Advertisement

ಉಡುಪಿಯಲ್ಲಿ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾದಿಕಾರಿಯಯನ್ನು ಮರಳು ದಂಧೆಕೋರರು ಹತ್ಯೆಗೈಯಲು ಯತ್ನಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ. 

ದಿಢೀರ್‌ ದಾಳಿ ನಡೆಸಿ ಎಸಿ ಕುಮಾರಸ್ವಾಮಿ ಮತ್ತು ತಹಶೀಲ್ದಾರ್‌ ಸಂತೋಷ್‌ ಕುಮಾರ್‌ ಅವರು ಲಾರಿ ತಡೆದಾಗ, ಚಾಲಕ ಲಾರಿಯನ್ನು ನಿಲ್ಲಿಸದೆ ಮೈಮೇಲೆ  ಹತ್ತಿಸಲೆತ್ನಿಸದ್ದಾನೆ. ಇಬ್ಬರೂ ಕ್ಷಣದಲ್ಲೇ ಪಾರಾಗಿದ್ದಾರೆ. ಕೂಡಲೇ ಸ್ಥಳದಿಂದ ಅಕ್ಕಿ ತುಂಬಿದ್ದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ.

ದಾವಣಗೆರೆ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಗೋದಾಮನ್ನು ಸೀಜ್‌ ಮಾಡಿ ಪ್ರಕರಣ ದಾಖಲಿಸಿ ಕೆಲವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ. 

Advertisement

Udayavani is now on Telegram. Click here to join our channel and stay updated with the latest news.

Next