Advertisement

Davanagere ಅತ್ಯಾಚಾರ ಯತ್ನ; ಆರೋಪಿಗೆ 5 ವರ್ಷ ಜೈಲು, 10 ಸಾವಿರ ರೂ.ದಂಡ

10:05 PM Jul 29, 2024 | Team Udayavani |

ದಾವಣಗೆರೆ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿದ್ದ ಆರೋಪಿಗೆ ದಾವಣಗೆರೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌.ಟಿ.ಎಸ್‌.ಸಿ-1 ನ್ಯಾಯಾಲಯ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿದೆ.

Advertisement

ನ್ಯಾಮತಿ ತಾಲೂಕಿನ ಮುಸ್ಸೇನಾಳ್‌ ಗ್ರಾಮದ ರಂಜನ್‌ (21) ಶಿಕ್ಷೆಗೆ ಒಳಗಾದವ. 2019 ರ ಡಿ.1 ರಂದು ರಾತ್ರಿ ಅಪ್ರಾಪ್ತೆ ಮೂತ್ರ ವಿಸರ್ಜನೆಗೆ ತೆರಳಿದ್ದಳು. ಕೆಲ ಹೊತ್ತಿನ ನಂತರ ಅಳುತ್ತಾ ಮನೆಗೆ ಬಂದಾಗ ವಿಚಾರಿಸಿದಾಗ ಆರೋಪಿ ರಂಜನ್‌ ನನ್ನನ್ನು ಎತ್ತಿಕೊಂಡು ಶಂಕ್ರಣ್ಣನವರ ದನದ ಕೊಟ್ಟಿಗೆಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರ ಪ್ರಯತ್ನ ಮಾಡಿದ್ದಾನೆ ಎಂದು ತಿಳಿಸಿದ್ದಳು.

ಅಪ್ರಾಪ್ತೆಯ ತಂದೆ ನೀಡಿದ ದೂರು ಆಧರಿಸಿ ಹೊನ್ನಾಳಿ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಅಂದಿನ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್‌ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌.ಟಿ.ಎಸ್‌.ಸಿ-1 ನ್ಯಾಯಾಲಯದ ನ್ಯಾಯಾಧೀಶರಾದ ನಾರಾಯಣ ಹೆಗಡೆ ಆರೋಪಿಗೆ 5 ವರ್ಷ ಸಾದಾ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.

ದಂಡದ ಮೊತ್ತ 10 ಸಾವಿರ ರೂ.ಗಳನ್ನು ಸಂತ್ರಸ್ಥೆಗೆ ಪರಿಹಾರವಾಗಿ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸುನಂದಾ ಮಡಿವಾಳರ್‌ ವಾದ ಮಂಡಿಸಿದ್ದರು.

Advertisement

ಪ್ರಕರಣದ ತನಿಖೆ ನಡೆಸಿ, ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದ ತನಿಖಾಧಿಕಾರಿ ಟಿ.ವಿ. ದೇವರಾಜ್‌, ಸಿಬ್ಬಂದಿ, ಸರ್ಕಾರಿ ವಕೀಲೆ ಸುನಂದಾ ಮಡಿವಾಳ್‌ ಅವರ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್‌, ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ್‌, ಜಿ. ಮಂಜುನಾಥ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next