Advertisement

Davanagere: ಕಾರು- ಬಸ್ ಅಪಘಾತ; ಸ್ಥಳದಲ್ಲೇ ಮೃತಪಟ್ಟ ಕ್ರೈಸ್ತ ಧರ್ಮಗುರು

08:45 PM Jul 23, 2024 | Team Udayavani |

ದಾವಣಗೆರೆ: ಕಾರು ಮತ್ತು ಸಾರಿಗೆ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಮೃತಪಟ್ಟ ಘಟನೆ ಜು.23ರ ಮಂಗಳವಾರ ನ್ಯಾಮತಿ ತಾಲೂಕಿನ ಚಿನ್ನಿಕಟ್ಟೆ ಸವಳಂಗ ರಸ್ತೆಯಲ್ಲಿ ನಡೆದಿದೆ.

Advertisement

ಶಿಕಾರಿಪುರದ ಪುಷ್ಪ ಶಾಲೆ ಫಾ. ಆಂಥೋಣಿ(51) ಮೃತಪಟ್ಟವರು.

ಚಿನ್ನಿಕಟ್ಟೆಯ ಸವಳಂಗ ರಸ್ತೆಯಲ್ಲಿ ಮಂಗಳವಾರ, ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ  ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಆಂಥೋಣಿ ಸ್ಥಳದಲ್ಲಿಯೇ ಮೃತಪಟ್ಟರು.

ಶಿವಮೊಗ್ಗ ಕ್ಯಾಥೋಲಿಕ್ ಕ್ರೈಸ್ತ ಧರ್ಮ ಕ್ಷೇತ್ರದ  ಫಾದರ್ ಆಂಥೋಣಿ ಪೀಟರ್ ಶಿಕಾರಿಪುರದಲ್ಲಿ ಫಾದರ್ ಆಗಿದ್ದರು.

ಅವರೊಂದಿಗೆ ಪ್ರಯಾಣಿಸುತ್ತಿದ್ದ ಸ್ಟೀಫನ್ ಎಂಬವರು ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement

ಆಂಥೋಣಿ ಪೀಟರ್  ಶಿಕಾರಿಪುರ  ಕಿರಿಯ ಪುಷ್ಪ ಸಂತ ತೆರೆಸಾ ಚರ್ಚ್ ಧರ್ಮ ಗುರುಗಳಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದರ ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next