Advertisement

ದಾವಣಗೆರೆ ಜಿಲ್ಲೆಯಲ್ಲಿ 371 ಮಂದಿ ಗುಣಮುಖ : 384 ಹೊಸ ಪ್ರಕರಣ ಪತ್ತೆ

09:20 PM Jun 08, 2021 | Team Udayavani |

ದಾವಣಗೆರೆ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾದಿಂದ ಗುಣಮುಖರಾದ 371 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Advertisement

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ ೧೬೪ , ಹರಿಹರದಲ್ಲಿ 62, ಜಗಳೂರಿನಲ್ಲಿ 18, ಚನ್ನಗಿರಿ ಯಲ್ಲಿ 73 ಹೊನ್ನಾಳಿಯಲ್ಲಿ 51 ಹಾಗೂ ಹೊರ ಜಿಲ್ಲೆಯ ಮೂವರು ಒಳಗೊಂಡಂತೆ 371 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ 384 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 184 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 71, ಜಗಳೂರಿನಲ್ಲಿ 27, ಚನ್ನಗಿರಿಯಲ್ಲಿ 50, ಹೊನ್ನಾಳಿಯಲ್ಲಿ 39 ಹಾಗೂ ಹೊರ ಜಿಲ್ಲೆಯ 13 ಜನರುಒಳಗೊಂಡಂತೆ 384 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 24414, ಹರಿಹರದಲ್ಲಿ 6369, ಜಗಳೂರಿನಲ್ಲಿ 2433, ಚನ್ನಗಿರಿಯಲ್ಲಿ 5493, ಹೊನ್ನಾಳಿಯಲ್ಲಿ 5680, ಹೊರ ಜಿಲ್ಲೆಯ 1333 ಜನರು ಸೇರಿದಂತೆ ಈವರೆಗೆ ಒಟ್ಟು 45722 ಜನರು ಸೋಂಕಿಗೆ ಒಳಗಾಗಿದ್ದಾರೆ.

ಇದನ್ನೂ ಓದಿ :ಸಾರ್ವಜನಿಕ ಸ್ಥಳದಲ್ಲಿ ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್‌ ಗೆ ಕಪಾಳಮೋಕ್ಷ : ವಿಡಿಯೋ ವೈರಲ್

Advertisement

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 22548, ಹರಿಹರದಲ್ಲಿ 5814, ಜಗಳೂರಿನಲ್ಲಿ 2187, ಚನ್ನಗಿರಿಯಲ್ಲಿ 4955, ಹೊನ್ನಾಳಿಯಲ್ಲಿ 4746, ಹೊರ ಜಿಲ್ಲೆಯ 1218 ಜನರು ಸೇರಿದಂತೆ 41,468 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 3854 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿ ಕೊರೊನಾದಿಂದ ನಾಲ್ವರು ಮೃತಪಟ್ಟಿದ್ದಾರೆ. ಚನ್ನಗಿರಿಯ ಬಿಆರ್‌ಟಿ ಕಾಲೋನಿಯ 35 ವರ್ಷದ ಮಹಿಳೆ, ಜಗಳೂರು ತಾಲೂಕಿನ ಮದಕರಿಪುರ ಗ್ರಾಮದ 42 ವರ್ಷದ ವ್ಯಕ್ತಿ, ಹರಿಹರ ತಾಲೂಕಿನ ಬೇವಿನಹಳ್ಳಿ ಗ್ರಾಮದ 48 ವರ್ಷದ ಮಹಿಳೆ, ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯ 60 ವರ್ಷದ ವೃದ್ಧ ಮೃತಪಟ್ಟವರು. ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 400 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 190 ಸೋಂಕಿತರು ಸಾಮಾನ್ಯ, 734 ಸೋಂಕಿತರು ಆಕ್ಸಿಜನ್, 30 ಸೋಂಕಿತರು ಎನ್‌ಐವಿ, 51ಸೋಂಕಿತರು ವೆಂಟಿಲೇಟರ್ 34 ಸೋಂಕಿತರು ವೆಂಟಿಲೇಟರ್ ರಹಿತ, 827 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 925 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಜಿಲ್ಲೆಯಲ್ಲಿ ಮಂಗಳವಾರ ಆರು ಜನರಲ್ಲಿ ಹೊಸದಾಗಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 35, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ 25, ಬಾಪೂಜಿ ಆಸ್ಪತ್ರೆಯಲ್ಲಿ ಇಬ್ಬರು, ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ಒಬ್ಬರು ಒಳಗೊಂಡಂತೆ ಒಟ್ಟು 63 ಜನರು ಚಿಕಿತ್ಸೆ ಪಡೆಯುತ್ತಿದ್ದರು. ಅವರಲ್ಲಿ ಈವರೆಗೆ 19 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನುಳಿದ 44 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ 23, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ ತಲಾ 19, ಬಾಪೂಜಿ ಮತ್ತು ಕಾಲೇಜು ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next