Advertisement

ದಾವಣಗೆರೆ :ಪ್ರೀತಿಯ ನಾಟಕವಾಡಿ ಬಾಲಕಿಯ ಅಪಹರಣ : ಆರೋಪಿಗೆ 4 ವರ್ಷ ಜೈಲು ಶಿಕ್ಷೆ ಜೊತೆಗೆ ದಂಡ

02:23 PM Jun 13, 2022 | Team Udayavani |

ದಾವಣಗೆರೆ : ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ ಆಕೆಯನ್ನು ಅಪಹರಿಸಿದ್ದ ಆರೋಪಿಗೆ ದಾವಣಗೆರೆಯ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 4ವರ್ಷಗಳ ಕಾಲ ಜೈಲು ಸಜೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದೆ.

Advertisement

ಆಜಾದ್ ನಗರದ ಸುಭಾನ್ ಎಂಬಾತ ಶಿಕ್ಷೆಗೆ ಒಳಗಾದ ಆರೋಪಿ‌. ಸ್ಥಳೀಯ ನಿವಾಸಿಯೊಬ್ಬರ ಮನೆಯಿಂದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದನು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆದೇಶ ಹೊರಡಿಸಿದ್ದಾರೆ.

ಆರೋಪಿ ಸುಭಾನ್ 2019ರಲ್ಲಿ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವುದಾಗಿ ನಂಬಿಸಿ ಮದುವೆಯಾಗುವುದಾಗಿ ಪುಸಲಾಯಿಸಿ ಆಕೆಯನ್ನು ಮಹಾರಾಷ್ಟ್ರಕ್ಕೆ ಕರೆದುಕೊಂಡು ಹೋಗಿದ್ದ‌ ಈ ಹಿನ್ನೆಲೆಯಲ್ಲಿ ಸಂತ್ರಸ್ತೆಯ ಅಜ್ಜಿ ದಾವಣಗೆರೆ ನಗರದ ಮಹಿಳಾ ಠಾಣೆಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡು ತನಿಖೆ ನಡೆಸಿದ ಅಂದಿನ ಠಾಣಾಧಿಕಾರಿ ಪ್ರಕಾಶ್ ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ : ಬಿಸಿಸಿಐ ಗೆ ಭಾರೀ ಲಾಭ: 43,255 ಕೋಟಿ ರೂ ಗೆ ಬಿಕರಿಯಾದ ಐಪಿಎಲ್ ಪ್ರಸಾರ ಹಕ್ಕು!

Advertisement

ಪ್ರಕರಣದ ವಿಚಾರಣೆ ನಡೆಸಿದ ದಾವಣಗೆರೆಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಎನ್.ಶ್ರೀಪಾದ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 4ವರ್ಷ ಜೈಲುವಾಸ ಹಾಗೂ ಹತ್ತು ಸಾವಿರ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ರೇಖಾ ಎಸ್. ಕೋಟೆಗೌಡರ್ ವಾದ ಮಂಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next