Advertisement

ಭತ್ತ ಕಟಾವು ಯಂತ್ರದ ಬಾಡಿಗೆ ದರ ನಿಗದಿಪಡಿಸಿದ ಜಿಲ್ಲಾಧಿಕಾರಿ: ತಪ್ಪಿದಲ್ಲಿ ಕಾನೂನು ಕ್ರಮ

01:56 PM Oct 30, 2020 | keerthan |

ದಾವಣಗೆರೆ: ಕೋವಿಡ್‌-19 ಸೋಂಕಿನ ಸಂಕಷ್ಟದ ಸಂದರ್ಭದಲ್ಲಿ ಭತ್ತದ ಕಟಾವು ಯಂತ್ರಗಳಿಗೆ ಪ್ರತಿ ಗಂಟೆಗೆ 1,800 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಬೇಕು. ತಪ್ಪಿದಲ್ಲಿ ಭತ್ತ ಕಟಾವು ಯಂತ್ರದ ಮಾಲಿಕರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಎಚ್ಚರಿಸಿದ್ದಾರೆ.

Advertisement

ಜಿಲ್ಲೆಯಲ್ಲಿ 2020-21ನೇ ಸಾಲಿನ ಮುಂಗಾರಿನ ಹಂಗಾಮಿನಲ್ಲಿ 66,046 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಲಾಗಿದ್ದು, ಸದ್ಯ ಭತ್ತದ ಬೆಳೆಯು ಬಹುತೇಕ ಕಾಳು ಬೆಳೆಯುವ ಹಂತದಲ್ಲಿರುವುದರಿಂದ ಇನ್ನು 2 ರಿಂದ 3 ವಾರಗಳಲ್ಲಿ ಕಟಾವು ಪ್ರಾರಂಭವಾಗಲಿದೆ. ಶೇ. 95 ರಷ್ಟು ರೈತರು ಭತ್ತದ ಬೆಳೆಯನ್ನು ಭತ್ತ ಕಟಾವು ಯಂತ್ರಗಳ ಮೂಲಕ ಕಟಾವು ಮಾಡುತ್ತಿದ್ದು, ತಮ್ಮ ಸಮೀಪದ ಕೃಷಿ ಯಂತ್ರಧಾರೆ ಕೇಂದ್ರಗಳಲ್ಲಿ ಲಭ್ಯಯವಿರುವ ಭತ್ತ ಕಟಾವು ಯಂತ್ರಗಳ ಪ್ರಯೋಜನ ಪಡೆಯಬಹುದಾಗಿರುತ್ತದೆ.

ಇದನ್ನೂ ಓದಿ:ನದಿ ಹರಿಯುವ ಊರಿನಲ್ಲಿ ಮರಳಿಗೆ ಈಗ ಬರ

ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲಿಕರು ರೈತರಿಂದ ಪ್ರತಿ ಗಂಟೆಗೆ 2,500 ರಿಂದ 3 ಸಾವಿರದವರೆಗೆ ಬಾಡಿಗೆ ಹಣ ನಿಗದಿಪಡಿಸುತ್ತಿರುವುದು ಕಂಡುಬಂದಿರುವುದರಿಂದ ರೈತರಿಗೆ ಹೆಚ್ಚಿನ ಆರ್ಥಿಕ ಹೊರೆಯಾಗಲಿದೆ. ಪ್ರತಿ ಗಂಟೆಗೆ 1,800 ರೂ. ಮೀರದಂತೆ ಬಾಡಿಗೆ ನಿಗದಿಪಡಿಸಿಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next