Advertisement

ದಾವಣಗೆರೆ: ಜಿಲ್ಲಾ ರಕ್ಷಣಾಧಿಕಾರಿಗೆ ಕೋವಿಡ್ 19 ಪಾಸಿಟಿವ್

02:31 AM Aug 08, 2020 | Hari Prasad |

ದಾವಣಗೆರೆ: ಇಲ್ಲಿನ ಜಿಲ್ಲಾ ರಕ್ಷಣಾಧಿಕಾರಿಗೂ ಕೋವಿಡ್ 19 ಸೋಂಕು ದೃಢಪಟ್ಟಿದೆ.

Advertisement

ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಜಿ.‌ ಬೀಳಗಿ ಹೋಂ ಕ್ವಾರಂಟೈನ್ ನಲ್ಲಿ ಇದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಜಿಲ್ಲಾ ರಕ್ಷಣಾಧಿಕಾರಿಯವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣಕ್ಕೆ ತಾವು ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ತಿಳಿಸಿದ್ದಾರೆ.

ಮತ್ತು ತಮ್ಮ ಗೃಹ ಕಚೇರಿಯಿಂದ ಕಾರ್ಯನಿರ್ವಹಿಸುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಸೋಂಕಿತರ ಸಂಖ್ಯೆಗಿಂತ ಈ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆಯೇ ಹೆಚ್ಚಾಗಿದೆ. ಶುಕ್ರವಾರ 110 ಜನರಲ್ಲಿ ಹೊಸದಾಗಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ.

Advertisement

ಒಂದೇ ದಿನದಲ್ಲಿ 206 ಜನರು ಕೋವಿಡ್ 19 ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ‌ ಜಿಲ್ಲೆಯಲ್ಲಿ ಈವರೆಗೆ 3151 ಪ್ರಕರಣಗಳಲ್ಲಿ 2048 ಸೋಂಕಿತರು ಬಿಡುಗಡೆಯಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ದಾವಣಗೆರೆಯ ಹೊಂಡದ ವೃತ್ತದ ನಿವಾಸಿ 72 ವರ್ಷದ ವೃದ್ಧ (ರೋಗಿ ನಂಬರ್ 169110), ಬಾಷಾನಗರದ 40 ವರ್ಷದ ವ್ಯಕ್ತಿ (ರೋಗಿ ನಂಬರ್ 160286) ಮೃತಪಟ್ಟವರು. ಇಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿದೆ ಮತ್ತು ಜಿಲ್ಲೆಯಲ್ಲಿ ಇನ್ನೂ 1020 ಸಕ್ರಿಯ ಪ್ರಕರಣಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next