Advertisement

ಯಾವುದೇ ತೊಂದರೆ ಆಗದಂತೆ ಚಿಕಿತ್ಸೆ ಕೊಡಿಸುತ್ತೇವೆ: ಭಾವುಕರಾದ ದಾವಣಗೆರೆ ಡಿಸಿ

02:43 PM Jul 26, 2020 | keerthan |

ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಕೋವಿಡ್-19 ಸೋಂಕಿತ‌ರ ಸಂಬಂಧಿಯೊಬ್ಬರು ಚಿಕಿತ್ಸೆ ಕೊಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರ ಕಾಲಿಗೆ ಬೀಳಲು ಮುಂದಾದಾಗ ಸ್ವತಃ ಜಿಲ್ಲಾಧಿಕಾರಿಯವರೇ ಸೋಂಕಿತನ ಸಂಬಂಧಿಯ ಕಾಲಿಗೆ ಬೀಳಲು ಮುಂದಾದ ಘಟನೆ ಭಾನುವಾರ ನಡೆದಿದೆ.

Advertisement

ದಾವಣಗೆರೆ ಮಹಾನಗರ ಪಾಲಿಕೆ ಪೌರ ಕಾರ್ಮಿಕ ಕುಮಾರ್ (35) ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆತನ ಸಂಬಂಧಿಕರು ದಾವಣಗೆರೆಯ ವಿವಿಧ ಆಸ್ಪತ್ರೆ ಗೆ ಕರೆದೊಯ್ದರೂ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಕೊನೆಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.

ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಂದಿದ್ದನ್ನ ಕಂಡಂತಹ ಕುಮಾರ್ ಸಂಬಂಧಿ ಉಚ್ಚೆಂಗೆಪ್ಪ ಎನ್ನುವರು ಜಿಲ್ಲಾಧಿಕಾರಿಯ ಕಾಲಿಗೆ ಬೀಳಲು ಮುಂದಾದರು. ಆಗ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರೇ, ನಾನೇ ಕಾಲಿಗೆ ಬೀಳುತ್ತೇನೆ. ನಿಮಗೆ ಯಾವುದೇ ರೀತಿಯ ತೊಂದರೆ ಆಗದಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಈ ನಡುವೆ ಪೌರ ಕಾರ್ಮಿಕ ಕುಮಾರ್ ಮೃತಪಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next