Advertisement

Davanagere; ವರದಕ್ಷಿಣೆ ಕಿರುಕುಳ: 5 ವರ್ಷದ ಮಗಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

08:46 PM Oct 16, 2023 | Team Udayavani |

ದಾವಣಗೆರೆ: ವರದಕ್ಷಿಣೆ ಕಿರುಕುಳದಿಂದ ಬೇಸತ್ತ ತಾಯಿ ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಸೂಳೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

Advertisement

ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ಮಂಜುನಾಥ್ ಎಂಬುವರ ಪತ್ನಿ ಕವಿತಾ(27), ನಿಹಾರಿಕಾ ಆತ್ಮಹತ್ಯೆ ಮಾಡಿಕೊಂಡವರು.

ಕಳೆದ ಶುಕ್ರವಾರ ಕವಿತಾ ಮತ್ತು ನಿಹಾರಿಕಾ ಹೊನ್ನೆಬಾಗಿ ಗ್ರಾಮದಿಂದ ಕಾಣೆಯಾಗಿದ್ದರು. ಈ ಸಂಬಂಧ ಮಂಜುನಾ ಥ್ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು. ಸೋಮವಾರ ಸೂಳೆಕೆರೆಯಲ್ಲಿ ತಾಯಿ-ಮಗಳು ಶವ ವಾಗಿ ಪತ್ತೆಯಾಗಿದ್ದಾರೆ. ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.ಕೆರೆಗೆ ಹಾರುವ ಮುನ್ನ ಮಗಳನ್ನು ವೇಲ್‌ನಿಂದ ಸೊಂಟಕ್ಕೆ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದರು ಎಂಬುದು ಬೆಳಕಿಗೆ ಬಂದಿದೆ.

ಮೂಲತ ಎರೇಹಳ್ಳಿಯ ನಿವಾಸಿ ಕವಿತಾ ವಿವಾಹ ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್‌ನೊಂದಿಗೆ ನಡೆದಿತ್ತು. ಹಲವಾರು ವರ್ಷಗಳಿಂದ ಪತಿ ಹಾಗೂ ಅವರ ಮನೆಯವರಿಂದ ನಿರಂತರ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು ಎನ್ನಲಾಗುತ್ತಿದೆ. ಪತಿ ಹಾಗೂ ಮನೆಯವರ ಕಿರುಕಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕವಿತಾ ಮನೆಯವರು ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next