Advertisement

Davanagere: ವಿದ್ಯುತ್ ಶಾಕ್‌ನಿಂದ ಸ್ಥಳದಲ್ಲೇ ಮೃತಪಟ್ಟ ದಂಪತಿ

07:00 PM Aug 15, 2024 | Team Udayavani |

ದಾವಣಗೆರೆ: ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ(ಆ.15) ದಾವಣಗೆರೆ ಕಾಟೇಹಳ್ಳಿಯಲ್ಲಿ ಸಂಭವಿಸಿದೆ. ಕಾಟೇಹಳ್ಳಿ ಗ್ರಾಮದ ನಾಗರಾಜ್(35), ಲತಾ(30) ಸ್ಥಳದಲ್ಲೇ ಮೃತಪಟ್ಟ ದಂಪತಿ.

Advertisement

ಒಂದುವರೆ ಎಕರೆ ನೀರಾವರಿ ಜಮೀನಿನಲ್ಲಿ ಟೊಮೊಟೊ, ಕೋಸು ಬೆಳೆದಿದ್ದರು. ಗುರುವಾರ ಬೆಳಗ್ಗೆ ಎಂದಿನಂತೆ ಜಮೀನಿಗೆ ತೆರಳಿದ್ದರು. ಕಳೆದ ರಾತ್ರಿ ಧಾರಾಕಾರವಾಗಿ ಮಳೆ ಸುರಿದು, ಜಮೀನಿನಲ್ಲಿ ನೀರು ನಿಂತಿತ್ತು. ಟಿಸಿ ಹಾಕಿದ್ದ ವಿದ್ಯುತ್ ಕಂಬದ  ತಂತಿಗೆ ಕೈ ಮುಟ್ಟಿದ್ದರಿಂದ ವಿದ್ಯುತ್ ಶಾಕ್‌ಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದಂಪತಿ 3ನೇ ತರಗತಿ ಓದುತ್ತಿರುವ ಸಾನ್ವಿ, ಯುಕೆಜಿ ಓದುತ್ತಿರುವ ಖುಷಿ ಎಂಬ ಇಬ್ಬರು ಪುತ್ರಿಯರ ಅಗಲಿದ್ದಾರೆ. ತಂದೆ- ತಾಯಿ ಇಬ್ಬರ ಕಳೆದುಕೊಂಡ ಮಕ್ಕಳ ರೋಧನ ಹೇಳತೀರದಾಗಿದೆ.
ಘಟನಾ  ಸ್ಥಳಕ್ಕೆ ಶಾಸಕ ಭೇಟಿ:
ಕಾಟೇಹಳ್ಳಿ ಗ್ರಾಮದಲ್ಲಿ ವಿದ್ಯುತ್ ಅವಘಡದಿಂದ ದಂಪತಿ ಮೃತಪಟ್ಟಿರುವ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ದೌಡಾಯಿಸಿದ ಮಾಯಗೊಂಡ  ಶಾಸಕ ಕೆ.ಎಸ್.ಬಸವಂತಪ್ಪ ಸಂಭವಿಸಿದ ಘಟನೆ ಬಗ್ಗೆ ಗ್ರಾಮಸ್ಥರಿಂದ ಮಾಹಿತಿ ಪಡೆದು ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಬೆಸ್ಕಾಂ ಮತ್ತು ಪೊಲೀಸರಿಗೆ ಮಾಹಿತಿ ನೀಡಿ ಮೃತದೇಹಗಳ ಶವಾಗಾರಕ್ಕೆ ಸಾಗಿಸಲು ನೆರವಾದರು. ಮಕ್ಕಳಿಗೆ ಪರಿಹಾರ ನೀಡಲು ಬೆಸ್ಕಾಂ ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next