Advertisement
ಭಾನುವಾರ ದಾವಣಗೆರೆಯ ನಾಯಕರ ಹಾಸ್ಟೆಲ್ನಲ್ಲಿ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಜಿಲ್ಲಾ ಫಟಕ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸಾಕಷ್ಟು ಹಿಂದಿರುವ ನಾಯಕ ಸಮಾಜದ ಅಭಿವೃದ್ಧಿಗೆ ಅಧಿಕಾರಿಗಳು, ನೌಕರರು ಒಂದಾಗಬೇಕು. ಸಹಾಯ, ಸಹಕಾರ, ನೆರವು ನೀಡಬೇಕು ಎಂದರು.
Related Articles
Advertisement
ನಾನೂ ಸಹ ದಾವಣಗೆರೆಯ ನಾಯಕರ ಹಾಸ್ಟೆಲ್ ವಿದ್ಯಾರ್ಥಿ. ದಾವಣಗೆರೆಯಲ್ಲಿ ನಾಯಕ ಸಮಾಜದ ಮಹಿಳಾ ಹಾಸ್ಟೆಲ್ ನಿರ್ಮಾಣದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ಮಾಡುತ್ತೇನೆ. ನಮ್ಮ ಸಮಾಜದ ಯಾವುದೇ ಕೆಲಸ-ಕಾರ್ಯಕ್ಕೆ ಸದಾ ಬೆನ್ನಲುಬಾಗಿ ಇರುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಬಿ. ಆನಂದ್ ಮಾತನಾಡಿ, ನಾಯಕ ಸಮಾಜದವರು ಹಕ್ಕುಗಳಿಗೆ ಹೋರಾಟ ಮಾಡಬೇಕು. ಅನೇಕರಿಗೆ ಸರ್ಕಾರದಿಂದ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಗೊತ್ತೇ ಇಲ್ಲ. ಸಮಾಜದ ಮುಖ್ಯವಾಹಿನಿಗೆ ಬರದೇ ಇರುವರನ್ನು ಗುರುತಿಸಿ, ಸೌಲಭ್ಯ ಒದಗಿಸಿಕೊಡುವತ್ತ ಎಲ್ಲರೂ ಗಮನ ಹರಿಸಬೇಕು ಎಂದು ತಿಳಿಸಿದರು.
ಇಂದಿನ ಆಧುನಿಕ ಜಗತ್ತಿನಲ್ಲಿ ಶಿಕ್ಷಣದಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ. ಹಾಗಾಗಿ ನಮ್ಮ ಸಮಾಜದವರು ಚೆನ್ನಾಗಿ ಓದಬೇಕು. ಅಭಿವೃದ್ಧಿ ಹೊಂದಬೇಕು. ಕೆಲವಾರು ಕಾರಣದಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟವರ ಗುರುತಿಸಿ, ಮತ್ತೆ ಶಿಕ್ಷಣ ಪಡೆಯುವ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ರಾಜ್ಯ ಘಟಕದ ಅಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಅಧ್ಯಕ್ಷ ಶ್ರೀನಿವಾಸನಾಯಕ, ಟಿ. ರಾಜಣ್ಣ, ಡಾ| ಎ.ಬಿ. ರಾಮಚಂದ್ರಪ್ಪ, ಮಹಾನಗರ ಪಾಲಿಕೆ ಸದಸ್ಯ ವಿನಾಯಕ ಪೈಲ್ವಾನ್, ಡಾ| ನಂದಕುಮಾರ್, ಎಂ. ಗದಿಗೆಪ್ಪ, ಶ್ರೀನಿವಾಸ್ ದಾಸಕರಿಯಪ್ಪ, ವಿಜಯಲಕ್ಷ್ಮಿ ಇತರರು ಇದ್ದರು.